ಭದ್ರಾ ನಾಲೆಯಲ್ಲಿ ಮುಂದುವರೆದ ಸರ್ಚ್‌ ಆಪರೇಷನ್‌, ಇಬ್ಬರ ಮೃತದೇಹ ಪತ್ತೆ, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 MAY 2023

LAKKAVALLI : ಭದ್ರಾ ನಾಲೆಯಲ್ಲಿ (Bhadra Canal) ನೀರು ಪಾಲಾಗಿದ್ದ ಮೂವರ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಮತ್ತೊಬ್ಬ ಯುವತಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮನೆ ಮಕ್ಕಳನ್ನು ಕಳೆದುಕೊಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಮದುವೆ ಸಂಭ್ರಮದಲ್ಲಿರಬೇಕಿದ್ದ ಮನೆಯಲ್ಲಿ ಸೂತಕ ಆವರಿಸಿದೆ.

Three-Drowned-in-Bhadra-Canal-in-Lakkavalli-in-Chikkamagaluru

ಲಕ್ಕವಳ್ಳಿ ಸಮೀಪ ಭದ್ರಾ ಬಲದಂಡೆ ನಾಲೆಯಲ್ಲಿ (Bhadra Canal) ಭಾನುವಾರ ಸಂಜೆ ನಂಜನಗೂಡಿನ ಶಾಮವೇಣಿ (16), ಶಿವಮೊಗ್ಗದ ಸೋಮಿನಕೊಪ್ಪದ ಅನನ್ಯಾ (16) ಮತ್ತು ಲಕ್ಕವಳ್ಳಿಯ ರವಿಚಂದ್ರ (35) ನೀರು ಪಾಲಾಗಿದ್ದರು. ಸೋಮವಾರ ಬೆಳಗ್ಗೆ ಅನನ್ಯಾ ಮತ್ತು ಸಂಜೆ ವೇಳೆಗೆ ರವಿಚಂದ್ರ ಅವರ ಮೃತದೇಹ ಪತ್ತೆಯಾಗಿದೆ. ಶಾಮವೇಣಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ನಾಲೆಯಲ್ಲಿ ಕಾಲು ಇಳಿ ಬಿಟ್ಟು ಆಟ

ಲಕ್ಕವಳ್ಳಿಯಲ್ಲಿರುವ ಸೋದರ ಮಾವ ರವಿಚಂದ್ರ ಅವರ ಮನೆಗೆ ಶಾಮವೇಣಿ ಮತ್ತು ಅನನ್ಯಾ ಬಂದಿದ್ದರು. ಭಾನುವಾರ ಸಂಜೆ ರವಿಚಂದ್ರ, ಅವರ ಪತ್ನಿ, ಇಬ್ಬರು ಮಕ್ಕಳೊಂದಿಗೆ ಶಾಮವೇಣಿ ಮತ್ತು ಅನನ್ಯಾ ವಾಯುವಿಹಾರಕ್ಕೆ ತೆರಳಿದ್ದರು. ಈ ವೇಳೆ ಭದ್ರಾ ನಾಲೆಯ ಕಟ್ಟೆ ಮೇಲೆ ಕುಳಿತ ಶಾಮವೇಣಿ, ಅನನ್ಯಾ, ರವಿಚಂದ್ರ ಅವರ ಮಕ್ಕಳು ಕಾಲು ನೀರಿನಲ್ಲಿ ಆಡಿಸುತ್ತಿದ್ದರು. ರವಿಚಂದ್ರ ಅವರ ಪತ್ನಿ ಗದರಿದ್ದರಿಂದ ಅವರ ಇಬ್ಬರು ಮಕ್ಕಳು ನಾಲೆಯ ಬಳಿಯಿಂದ ದೂರ ಬಂದಿದ್ದಾರೆ. ಅನನ್ಯಾ ಮತ್ತು ಶಾಮವೇಣಿ ಆಟ ಮುಂದುವರೆಸಿದ್ದರು ಎಂದು ತಿಳಿದು ಬಂದಿದೆ.

ಕಾಲು ಜಾರಿ ಒಬ್ಬರ ಹಿಂದೆ ಒಬ್ಬರು

ಕಾಲು ಜಾರಿ ಅನನ್ಯಾ ನಾಲೆಗೆ ಬಿದ್ದಿದ್ದಾಳೆ. ಆಕೆಯ ರಕ್ಷಣೆಗೆ ಶಾಮವೇಣಿ ಮತ್ತು ರವಿಚಂದ್ರ ಅವರು ಒಬ್ಬರ ಹಿಂದೆ ಒಬ್ಬರು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅಲ್ಲಿಯೇ ಇದ್ದ ರವಿಚಂದ್ರ ಅವರ ಪತ್ನಿ ಮತ್ತು ಮಕ್ಕಳು ರಕ್ಷಣೆಗೆ ಕೂಗಿಕೊಂಡಿದ್ದಾರೆ. ಕೂಡಲೆ ಸ್ಥಳೀಯರು ಧಾವಿಸಿದ್ದಾರೆ. ಆದರೆ ಭದ್ರಾ ನಾಲೆಯಲ್ಲಿ ಮೇಲ್ಮಟ್ಟದವರೆಗೆ ನೀರು ಹರಿಯುತ್ತಿದ್ದರಿಂದ ರಕ್ಷಣಾ ಕಾರ್ಯ ಸಾಧ್ಯವಾಗಲಿಲ್ಲ.

Chikkamagaluru-SP-Uma-Prashanath-Visit-Bhadra-Canal-at-Lakkavalli

ಇಬ್ಬರ ಮೃತದೇಹ ಪತ್ತೆ

ವಿಚಾರ ತಿಳಿದು ಲಕ್ಕವಳ್ಳಿ ಠಾಣೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಸೋಮವಾರ ಬೆಳಗ್ಗೆ ಅನನ್ಯಾಳ ಮೃತದೇಹ ಪತ್ತೆಯಾಗಿತ್ತು. ಇವರು ನೀರಿಗೆ ಬಿದ್ದ ಸುಮಾರು ನಾಲ್ಕು ಕಿ.ಮೀ ದೂರದರಲ್ಲಿ ರವಿಚಂದ್ರ ಅವರ ಮೃತದೇಹ ಸಿಕ್ಕಿದೆ. ಶಾಮವೇಣಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ – ಫಟಾಫಟ್‌ ನ್ಯೂಸ್‌ 8 AM – ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಟಾಪ್‌ 10 ನ್ಯೂಸ್

ಸಂಭ್ರಮ ಇರಬೇಕಿದ್ದಲ್ಲಿ ಸೂತಕ

ಕುಟುಂಬದವರ ಮದುವೆ ಸಮಾರಂಭದ ಹಿನ್ನೆಲೆ ಅನನ್ಯಾ ಮತ್ತು ಶಾಮವೇಣಿ ಅವರು ಸೋದರ ರವಿಚಂದ್ರ ಅವರ ಮನೆಗೆ ಬಂದಿದ್ದರು. ಭಾನುವಾರ ಮಧ್ಯಾಹ್ನ ಎಲ್ಲರು ಒಟ್ಟಿಗೆ ಊಟ ಮಾಡಿದ್ದರು. ಸಂಜೆ ವಾಯು ವಿಹಾರಕ್ಕೆಂದು ಭದ್ರಾ ನಾಲೆ ಬಳಿ ಆಗಮಿಸಿದ್ದರು. ನಾಲೆಯ ಕಟ್ಟೆಯ ಮೇಲೆ ನಿಂತು ಎಲ್ಲರು ಫೋಟೊ ಕ್ಲಿಕ್ಕಿಸಿಕೊಂಡಿದ್ದರು. ಕೆಲವೇ ನಿಮಿಷದಲ್ಲಿ ವಿಧಿ ಕರಾಳ ರೂಪ ತಳೆದಿದೆ.

ಲಕ್ಕವಳ್ಳಿ ಠಾಣೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.

WATCH VIDEO

[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 23, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment