ಅರಣ್ಯ ಇಲಾಖೆ ಸಿಬ್ಬಂದಿ ಸೇರಿ ಭದ್ರಾವತಿ ತಾಲೂಕಿನ ಏಳು ಮಂದಿಯಲ್ಲಿ ಕರೋನ ಸೋಂಕು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 29 ಜುಲೈ 2020

ಅರಣ್ಯ ಇಲಾಖೆಯ ಸಿಬ್ಬಂದಿ ಸೇರಿ ಏಳು ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಎಲ್ಲರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಕೂಡ್ಲಿಗೆರೆಯ ಅರಣ್ಯ ಸಿಬ್ಬಂದಿ (35), ಹುತ್ತ ಕಾಲೋನಿಯ ಅರಣ್ಯ ಸಿಬ್ಬಂದಿ (35) ಇವರಲ್ಲಿ ಸೋಂಕು ಪತ್ತೆಯಾಗಿದೆ. ಮತ್ತೊಂದೆಡೆ ಗಾಂಧಿ ನಗರದ ನಿವಾಸಿ (43), ಹಳೇ ಬುಳ್ಳಾಪುರದ ಪುರುಷ (34), ವಿಜಯನಗರದ ಪುರುಷ (30), ಕಲ್ಲಹಳ್ಳಿಯ ಪುರುಷ (30), ಮಾಚೇನಹಳ್ಳಿಯ ಪುರುಷ (35) ಇವರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸೋಂಕಿತ ವ್ಯಕ್ತಿಯ ಮನೆ ಪ್ರದೇಶದಲ್ಲಿ ಸೀಲ್‍ಡೌನ್ ಮಾಡಲಾಗಿದೆ. ಈ ಪ್ರದೇಶಗಳಿಗೆ ತಾಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ನಗರಸಭೆ ಆಯುಕ್ತ ಮನೋಹರ್, ತಹಶೀಲ್ದಾರ್ ಶಿವಕುಮಾರ್, ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸೀಲ್‍ಡೌನ್ ಮಾಡಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment