ಶಿವಮೊಗ್ಗದ ಲೈವ್.ಕಾಂ | SHANKARAGHATTA NEWS | 18 ಜನವರಿ 2022
ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಭದ್ರಾವತಿ ತಾಲೂಕಿನ ಶಂಕರಘಟ್ಟ ಗ್ರಾಮವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ. ಅಲ್ಲದೆ ಕಂಟೈನ್ಮೆಂಟ್ ಜೋನ್ ನಿರ್ವಹಣೆ ಅಧಿಕಾರಿಯನ್ನು ನೇಮಕ ಮಾಡಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ.
ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಂಕರಘಟ್ಟ ಗ್ರಾಮದಲ್ಲಿ ಕೋವಿಡ್ ಸೋಂಕಿತರ ಪ್ರಾಮಣ ಹೆಚ್ಚಳವಾಗಿದೆ. ಇದೇ ಗ್ರಾಮಕ್ಕೆ ಸೇರುವ ಕುವೆಂಪು ವಿಶ್ವವಿದ್ಯಾಲದಯಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ 24 ಮಂದಿಗೆ ಸೋಂಕು ತಗುಲಿದೆ. ಆದ್ದರಿಂದ ಕುವೆಂಪು ವಿವಿಗೆ ಐದು ದಿನ ರಜೆ ಘೋಷಿಸಲಾಗಿದೆ.
ಶಂಕರಘಟ್ಟ ಗ್ರಾಮದಲ್ಲಿ 214 ಮನೆಗಳಿವೆ. 25 ಅಂಗಡಿಗಳು, ಕಚೇರಿಗಳಿವೆ. 1345 ಜನಸಂಖ್ಯೆ ಇದೆ. ಸೋಂಕು ಹರಡದಂತೆ ತಡೆಯಲು ಕಂಟೈನ್ಮೆಂಟ್ ಜೋನ್ ಎಂದು ಘೋಷಣೆ ಮಾಡಿ ತಹಶೀಲ್ದಾರ್ ಪ್ರದೀಪ್ ನಿಕ್ಕಂ ಆದೇಶ ಹೊರಡಿಸಿದ್ದಾರೆ. ಇನ್ನು, ಈ ಕಂಟೈನ್ಮೆಂಟ್ ಜೋನ್ ನಿರ್ವಹಣೆಗಾಗಿ ಬಿ.ಆರ್.ಪ್ರಾಜೆಕ್ಟ್’ನ ಸಹಾಯಕ ಎಂಜಿನಿಯರ್ ರಾಜಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಅವರ ಮೊಬೈಲ್ ನಂಬರ್ 97427 68098.
ಇದನ್ನೂ ಓದಿ | ಇನ್ನೊಂದು ವಾರ ಕುವೆಂಪು ವಿವಿ ಸಂಪೂರ್ಣ ಬಂದ್, ಆನ್ಲೈನ್ನಲ್ಲಿ ತರಗತಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200