SHIVAMOGGA LIVE NEWS | 12 DECEMBER 2022
ಭದ್ರಾವತಿ : ಬೆಂಗಳೂರು – ತಾಳಗುಪ್ಪ ಇಂಟರ್ ಸಿಟಿ ರೈಲಿನ ಇಂಜಿನ್ ನಲ್ಲಿ (engine problem) ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಭದ್ರಾವತಿ ನಿಲ್ದಾಣದಿಂದ ಸ್ವಲ್ಪ ದೂರ ಬಂದು ರೈಲು ನಿಂತಿತ್ತು. ಪ್ರಯಾಣಿಕರು ಗೊಂದಲಕ್ಕೀಡಾಗಿದ್ದರು.
ಭದ್ರಾವತಿ ನಿಲ್ದಾಣಕ್ಕೆ 7.26ಕ್ಕೆ ಆಗಮಿಸಿದ್ದ ರೈಲು 7.27ಕ್ಕೆ ಹೊರಟಿತ್ತು. ಕಡದಕಟ್ಟೆ ಬಳಿ ರೈಲ್ವೆ ಇಂಜಿನ್ ಫೇಲ್ ಆಗಿ ನಿಂತಿತ್ತು. ಹಾಗಾಗಿ ಮುಂದೇನು ಎಂದು ತೋಚದೆ ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದರು. ಕೆಲವು ಪ್ರಯಾಣಿಕರು ರೈಲು ಇಳಿದು ಭದ್ರವತಿ ಬೈಪಾಸ್ ತನಕ ನಡೆದು, ಬಳಿಕ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ತೆರಳಿದರು. ಸಾಗರ, ತಾಳಗುಪ್ಪ ಹೋಗುವ ಪ್ರಯಾಣಿಕರು ಗೊಂದಲಕ್ಕೀಡಾಗಿದ್ದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಿಂದ ರಾಜ್ಯದ ಯಾವೆಲ್ಲ ಜಿಲ್ಲೆಗಳಿಗೆ ರೈಲ್ವೆ ಸಂಪರ್ಕವಿದೆ ಗೊತ್ತಾ?
ಸುಮಾರು ಒಂದು ಗಂಟೆ ನಿಂತಿದ್ದ ರೈಲು ಪುನಃ ಪ್ರಯಾಣ ಆರಂಭಿಸಿದೆ ಎಂದು ತಿಳಿದು ಬಂದಿದೆ. ಇದೆ ಕಾರಣಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ನಿಗದಿಗಿಂತಲೂ 1 ಗಂಟೆ 21 ನಿಮಿಷ ತಡವಾಗಿ ರೈಲು ಆಗಮಿಸಿತು. ಈಗ ತಾಳಗುಪ್ಪದ ಕಡೆಗೆ ಪ್ರಯಾಣ ಮುಂದುವರೆಸಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200