SHIVAMOGGA LIVE NEWS | 17 MAY 2024
BHADRAVATHI : ಹಾವಿನ ಹೊಟ್ಟೆ ಸೇರಿದ್ದ ಪ್ಲಾಸ್ಟಿಕ್ (Plastic) ಹೊರ ತೆಗೆದು ಉರಗ ರಕ್ಷಕರೊಬ್ಬರು ಅದರ ಪ್ರಾಣ ಉಳಿಸಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್ನಲ್ಲಿ ಕೆರೆಗೊಡ್ಡು ಹಾವು ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಹೊರಳಾಡಲಾಗದೆ, ಅತ್ತಿತ್ತ ಚಲಿಸದೆ ನಿತ್ರಾಣಗೊಂಡು ಲಾರಿಯೊಂದರ ಅಡಿ ಸೇರಿತ್ತು.
ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ಪ್ರಹ್ಲಾದ್ ರಾವ್ ಅವರು ಹಾವು ಹಿಡಿದು ಪ್ಲಾಸ್ಟಿಕ್ ಹೊರ ತೆಗೆದಿದ್ದರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಪ್ರಹ್ಲಾದ್ ರಾವ್, ‘ಪರಿಚಯದವರೊಬ್ಬರು ಕರೆ ಮಾಡಿ ವಿಷಯ ತಿಳಿಸಿದರು. ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಹಾವು ತನ್ನ ಆಹಾರವನ್ನು ಹೊರ ಹಾಕುವ ಸಾಮರ್ಥ್ಯ ಹೊಂದಿದೆ. ಆದರೆ ಪ್ಲಾಸ್ಟಿಕ್ ಹೊರ ತೆಗೆಯಲು ಆಗುವುದಿಲ್ಲ. ಅದು ಅಲ್ಲಿಯೇ ಸಾವನ್ನಪ್ಪುತ್ತಿತ್ತು. ಹಾವನ್ನು ಹಿಡಿದು ಕೂಡಲೆ ಪ್ಲಾಸ್ಟಿಕ್ ಹೊರ ತೆಗೆದು, ಬಿಡಲಾಯಿತು. ಹಾವು ಚೇತರಿಸಿಕೊಂಡಿದೆʼ ಎಂದು ತಿಳಿಸಿದರು.
ಇದನ್ನೂ ಓದಿ – ನಿದಿಗೆ ಬಳಿ ಟ್ಯಾಕ್ಸಿಯಿಂದ ಬಲಗಾಲು ಹೊರಗಿಟಿದ್ದಷ್ಟೇ, ಕಾಲು ಜಖಂ, ಪ್ರಜ್ಞಾಹೀನರಾದ ವ್ಯಕ್ತಿ
ಪ್ರಹ್ಲಾದ್ ರಾವ್ ಅವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಹ್ಲಾದ್ ರಾವ್ ಅವರು ಶ್ರೀ ಕಾಳಿಕಾಪರಮೇಶ್ವರಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಆಭರಣ ಪರಿವೀಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಹಾವುಗಳ ರಕ್ಷಣ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200