ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 MAY 2024
BHADRAVATHI : ಹಾವಿನ ಹೊಟ್ಟೆ ಸೇರಿದ್ದ ಪ್ಲಾಸ್ಟಿಕ್ (Plastic) ಹೊರ ತೆಗೆದು ಉರಗ ರಕ್ಷಕರೊಬ್ಬರು ಅದರ ಪ್ರಾಣ ಉಳಿಸಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್ನಲ್ಲಿ ಕೆರೆಗೊಡ್ಡು ಹಾವು ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಹೊರಳಾಡಲಾಗದೆ, ಅತ್ತಿತ್ತ ಚಲಿಸದೆ ನಿತ್ರಾಣಗೊಂಡು ಲಾರಿಯೊಂದರ ಅಡಿ ಸೇರಿತ್ತು.
ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ಪ್ರಹ್ಲಾದ್ ರಾವ್ ಅವರು ಹಾವು ಹಿಡಿದು ಪ್ಲಾಸ್ಟಿಕ್ ಹೊರ ತೆಗೆದಿದ್ದರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಪ್ರಹ್ಲಾದ್ ರಾವ್, ‘ಪರಿಚಯದವರೊಬ್ಬರು ಕರೆ ಮಾಡಿ ವಿಷಯ ತಿಳಿಸಿದರು. ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಹಾವು ತನ್ನ ಆಹಾರವನ್ನು ಹೊರ ಹಾಕುವ ಸಾಮರ್ಥ್ಯ ಹೊಂದಿದೆ. ಆದರೆ ಪ್ಲಾಸ್ಟಿಕ್ ಹೊರ ತೆಗೆಯಲು ಆಗುವುದಿಲ್ಲ. ಅದು ಅಲ್ಲಿಯೇ ಸಾವನ್ನಪ್ಪುತ್ತಿತ್ತು. ಹಾವನ್ನು ಹಿಡಿದು ಕೂಡಲೆ ಪ್ಲಾಸ್ಟಿಕ್ ಹೊರ ತೆಗೆದು, ಬಿಡಲಾಯಿತು. ಹಾವು ಚೇತರಿಸಿಕೊಂಡಿದೆʼ ಎಂದು ತಿಳಿಸಿದರು.
ಇದನ್ನೂ ಓದಿ – ನಿದಿಗೆ ಬಳಿ ಟ್ಯಾಕ್ಸಿಯಿಂದ ಬಲಗಾಲು ಹೊರಗಿಟಿದ್ದಷ್ಟೇ, ಕಾಲು ಜಖಂ, ಪ್ರಜ್ಞಾಹೀನರಾದ ವ್ಯಕ್ತಿ
ಪ್ರಹ್ಲಾದ್ ರಾವ್ ಅವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಹ್ಲಾದ್ ರಾವ್ ಅವರು ಶ್ರೀ ಕಾಳಿಕಾಪರಮೇಶ್ವರಿ ಕೋ ಆಪರೇಟಿವ್ ಸೊಸೈಟಿಯಲ್ಲಿ ಆಭರಣ ಪರಿವೀಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಹಾವುಗಳ ರಕ್ಷಣ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದಾರೆ.
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





