SHIVAMOGGA LIVE NEWS | 15 AUGUST 2023➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
BHADRAVATHI : ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಭದ್ರಾವತಿ ಹಳೆ ಸೇತುವೆ (Old Bridge) ಬಳಿ ಘಟನೆ ಸಂಭವಿಸಿದೆ. ದೊಡ್ಡೇರಿಯ ನರೇಂದ್ರ (30) ಮೃತ ವ್ಯಕ್ತಿ. ಇರಿತದಿಂದಾಗಿ ಗಂಭೀರ ಗಾಯಗೊಂಡಿದ್ದ ನರೇಂದ್ರನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆಸ್ಪತ್ರೆಯಲ್ಲಿ ಆತ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಸಹ್ಯಾದ್ರಿ ಕಾಲೇಜು ಬಳಿ ತಪ್ಪಿದ ಅನಾಹುತ, ಕಾರಿನಲ್ಲಿದ್ದವರು ತಕ್ಷಣ ಎಸ್ಕೇಪ್
ಸಿದ್ದಾಪುರ ತಾಂಡಾದ ಸುನಿಲ್ ಎಂಬಾತ ಕೃತ್ಯ ಎಸಗಿದ್ದಾನೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
.jpeg)