SHIVAMOGGA LIVE NEWS | 27 DECEMBER 2023
HOLEHONNURU : ಕೆಎಸ್ಆರ್ಟಿಸಿ ಬಸ್ಸುಗಳು ನಿಲುಗಡೆ ನೀಡದಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು. ಸರ್ಕಾರಿ ಬಸ್ಸುಗಳನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು.
![]() |
ಹೊಳೆಹೊನ್ನೂರು ಸಮೀಪ ಕೈಮರ ಸರ್ಕಲ್ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಮಾರ್ಗದಲ್ಲಿ ಹಾದು ಹೋಗುವ ಬಸ್ಸುಗಳು ವಿದ್ಯಾರ್ಥಿಗಳನ್ನು ಕಂಡರೆ ನಿಲುಗಡೆ ನೀಡುತ್ತಿಲ್ಲ. ಹಾಗಾಗಿ ನಿತ್ಯ ಶಾಲೆ, ಕಾಲೇಜಿಗೆ ತಡವಾಗಿ ತೆರಳುವಂತಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಇನ್ನು, ಕೆಎಸ್ಆರ್ಟಿಸಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಪಟ್ಟು ಹಿಡಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಾಯಿ ಮೇಲೆ ಗುಂಡಿನ ದಾಳಿ | ಜಿಲ್ಲೆಯ ಟಾಪ್ 15 ಸುದ್ದಿಗಳು | 27 ಡಿಸೆಂಬರ್ 2023
ಸುತ್ತಮುತ್ತಲ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಶಿವಮೊಗ್ಗದ ಶಾಲಾ, ಕಾಲೇಜುಗಳಿಗೆ ನಿತ್ಯ ಸಂಚರಿಸುತ್ತಾರೆ. ಕೈಮರ ಸರ್ಕಲ್ನಲ್ಲಿಯೆ ಬಸ್ ಹತ್ತುತ್ತಾರೆ. ಆದರೆ ವಿದ್ಯಾರ್ಥಿಗಳನ್ನು ಕಂಡರೆ ಬಸ್ಗಳು ನಿಲ್ಲಿತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವಕ್ತಪಡಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200