ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 6 JULY 2023
SHANKARAGHATTA : ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು (Students) ಪ್ರತಿಭಟನೆ ನಡೆಸಿದರು. ತರಗತಿಗಳನ್ನು ಬಹಿಷ್ಕರಿಸಿ ಸುರಿವ ಮಳೆಯನ್ನು ಲೆಕ್ಕಿಸದೆ ಮೆರವಣಿಗೆ ನಡೆಸಿದರು.

ವಿದ್ಯಾರ್ಥಿಗಳದ್ದು ಎರಡು ಬೇಡಿಕೆ
ಬೇಡಿಕೆ 1 : ವಿದ್ಯಾರ್ಥಿ ವೇತನದ ವ್ಯವಸ್ಥೆಯಲ್ಲಿ ಹಲವು ದೋಷಗಳಾಗಿವೆ. ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು ಯುಯುಸಿಎಂಎಸ್ ವಿಳಂಬ ಮಾಡಿದೆ. ಇದೆ ಕಾರಣಕ್ಕೆ ತಾಂತ್ರಿಕ ದೋಷದಿಂದಾಗಿ ಪ್ರಥಮ ವರ್ಷದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಇದನ್ನು ಕೂಡಲೆ ಪರಿಹರಿಸಬೇಕು ಎಂದು ವಿದ್ಯಾರ್ಥಿಗಳು (Students) ಆಗ್ರಹಿಸಿದರು.
ಇದನ್ನೂ ಓದಿ – ಗಾಜನೂರು ಜಲಾಶಯದ ಗೇಟ್ ಓಪನ್, ಹೊಳೆಗೆ ಹೆಚ್ಚುವರಿ ನೀರು
ಬೇಡಿಕೆ 2 : ಸೆಮಿಸ್ಟರ್ ಪರೀಕ್ಷೆ ಶುಲ್ಕ ದುಬಾರಿಯಾಗಿದೆ. ಇದನ್ನು ಕಡಿಮೆ ಮಾಡಿ, ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಹೊರೆಯನ್ನು ತಗ್ಗಿಸಬೇಕು ಎಂದು ಆಗ್ರಹಿಸಿದರು.
ಜೋರು ಮಳೆ ಲೆಕ್ಕಿಸಿದೆ ಮರೆವಣಿಗೆ
ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಮೆರವಣಿಗೆ ನಡೆಸಿದರು. ತರಗತಿಗಳನ್ನು ಬಹಿಷ್ಕರಿಸಿ ಆಡಳಿತ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ ವಿದ್ಯಾರ್ಥಿಗಳು ತಮ್ಮ ಬೇಡಿಕೆ ಈಡೇರಿಸುವಂತೆ ಪಟ್ಟು ಹಿಡಿದರು.
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು















