ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 6 JULY 2023
SHANKARAGHATTA : ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು (Students) ಪ್ರತಿಭಟನೆ ನಡೆಸಿದರು. ತರಗತಿಗಳನ್ನು ಬಹಿಷ್ಕರಿಸಿ ಸುರಿವ ಮಳೆಯನ್ನು ಲೆಕ್ಕಿಸದೆ ಮೆರವಣಿಗೆ ನಡೆಸಿದರು.

ವಿದ್ಯಾರ್ಥಿಗಳದ್ದು ಎರಡು ಬೇಡಿಕೆ
ಬೇಡಿಕೆ 1 : ವಿದ್ಯಾರ್ಥಿ ವೇತನದ ವ್ಯವಸ್ಥೆಯಲ್ಲಿ ಹಲವು ದೋಷಗಳಾಗಿವೆ. ದ್ವಿತೀಯ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು ಯುಯುಸಿಎಂಎಸ್ ವಿಳಂಬ ಮಾಡಿದೆ. ಇದೆ ಕಾರಣಕ್ಕೆ ತಾಂತ್ರಿಕ ದೋಷದಿಂದಾಗಿ ಪ್ರಥಮ ವರ್ಷದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಇದನ್ನು ಕೂಡಲೆ ಪರಿಹರಿಸಬೇಕು ಎಂದು ವಿದ್ಯಾರ್ಥಿಗಳು (Students) ಆಗ್ರಹಿಸಿದರು.
ಇದನ್ನೂ ಓದಿ – ಗಾಜನೂರು ಜಲಾಶಯದ ಗೇಟ್ ಓಪನ್, ಹೊಳೆಗೆ ಹೆಚ್ಚುವರಿ ನೀರು
ಬೇಡಿಕೆ 2 : ಸೆಮಿಸ್ಟರ್ ಪರೀಕ್ಷೆ ಶುಲ್ಕ ದುಬಾರಿಯಾಗಿದೆ. ಇದನ್ನು ಕಡಿಮೆ ಮಾಡಿ, ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಹೊರೆಯನ್ನು ತಗ್ಗಿಸಬೇಕು ಎಂದು ಆಗ್ರಹಿಸಿದರು.
ಜೋರು ಮಳೆ ಲೆಕ್ಕಿಸಿದೆ ಮರೆವಣಿಗೆ
ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಮೆರವಣಿಗೆ ನಡೆಸಿದರು. ತರಗತಿಗಳನ್ನು ಬಹಿಷ್ಕರಿಸಿ ಆಡಳಿತ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ ವಿದ್ಯಾರ್ಥಿಗಳು ತಮ್ಮ ಬೇಡಿಕೆ ಈಡೇರಿಸುವಂತೆ ಪಟ್ಟು ಹಿಡಿದರು.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





