ಹೊಳೆಹೊನ್ನೂರು: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 11 ಜನರು ನಾಯಿ ಕಡಿತಕ್ಕೆ (dog bite) ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ತೀರ್ಥಹಳ್ಳಿ ವ್ಯಕ್ತಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಕಾರಣವೇನು?
ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳು ನೀಡಿರುವ ಮಾಹಿತಿಯಂತೆ, ಒಟ್ಟು 11 ನಾಯಿ ಕಡಿತದ ಪ್ರಕರಣಗಳು ವರದಿಯಾಗಿವೆ. ದಾಳಿ ಮಾಡಿದ ನಾಯಿಯು ಹುಚ್ಚು ನಾಯಿ ಎಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಗಾಯಗೊಂಡ ಎಲ್ಲರಿಗೂ ತಕ್ಷಣವೇ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಅಗತ್ಯ ಲಸಿಕೆ ನೀಡಲಾಗಿದೆ.

ಹೊಳೆಹೊನ್ನೂರಿನ ಹೇಮಾವತಿ, ನಟರಾಜ, ಕವಿತಾ, ನೀಲಮ್ಮ , ಜಬ್ಬಾರ್ ಖಾನ್, ಮದಿಹಾ, ಅರಹತೊಳಲು ಗ್ರಾಮದ ಕೆ. ರಾಜಪ್ಪ, ತರೀಕೆರೆಯ ಗಿರೀಶ್ ಎಂಬುವವರಿಗೆ ನಾಯಿ ಕಚ್ಚಿದೆ ಎಂದು ತಿಳಿದು ಬಂದಿದೆ. ಇನ್ನು, ನಾಯಿ ಕಡಿತ ಸಂಬಂಧ ವೈದ್ಯಾಧಿಕಾರಿಗಳು ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಪತ್ರ ಬರೆದಿದ್ದಾರೆ.

LATEST NEWS
- ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

- KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

- ಶಿವಮೊಗ್ಗ ಸಮೀಪ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್ಸು, ಅದೃಷ್ಟವಶಾತ್ ಪ್ರಯಾಣಿಕರು ಪಾರು, ಆಗಿದ್ದೇನು?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 27 ಜನವರಿ 2026 | ಅಡಿಕೆ ಧಾರಣೆ

- ಶಿವಮೊಗ್ಗದ ವಸತಿ ಶಾಲೆಯ 17 ವಿದ್ಯಾರ್ಥಿನಿಯರು ಮೆಗ್ಗಾನ್ ಆಸ್ಪತ್ರೆಗೆ ದಾಖಲು, ಜಿಲ್ಲಾಧಿಕಾರಿ, ಸಿಇಒ ಭೇಟಿ

About The Editor
ನಿತಿನ್ ಆರ್.ಕೈದೊಟ್ಲು





