SHIVAMOGGA LIVE NEWS | 16 APRIL 2024
BHADRAVATHI : ತುಂಗಾ-ಭದ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗೆ ಭದ್ರಾವತಿ ತಹಶೀಲ್ದಾರ್ ಕೆ.ಆರ್.ನಾಗರಾಜು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಎಲ್ಲೆಲ್ಲಿ ನಿಷೇಧ? ಕಾರಣವೇನು?
ತಾಲೂಕಿನ ಡಣಾಯಕಪುರ, ಸಿದ್ಲೀಪುರ, ಸನ್ಯಾಸಿಕೊಡಮಗ್ಗಿ, ಮಂಗೋಟೆ, ಆನವೇರಿ, ವಡೇರಪುರ (ನಿಂಬೆಗೊಂದಿ) ಗ್ರಾಮಗಳಲ್ಲಿ ತುಂಗಾ – ಭದ್ರಾ ನದಿ ಪಾತ್ರಕ್ಕೆ ಅಕ್ರಮ ಪ್ರವೇಶವನ್ನು ನಿಷೇಧಿಸಲಾಗಿದೆ.
ಈ ಹಿಂದೆ ಇಲ್ಲಿನ ನಿಕ್ಷೇಪಗಳಲ್ಲಿ ಗಣಿಗಾರಿಕೆ ನಡೆಸಲು ಹರಾಜು ಮೂಲಕ 5 ವರ್ಷ ಅವಧಿಗೆ ವಿಲೇವಾರಿ ಮಾಡಲಾಗಿತ್ತು. ಅವಧಿ ಮುಗಿದರು ಅಕ್ರಮವಾಗಿ ಮರಳು ಗಣಿಗಾರಿಕೆ ಮುಂದುವರಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ವರದಿ ಸಲ್ಲಿಸಿದ್ದರು. ಅಲ್ಲದೆ ಇಲ್ಲಿನ ನಿಕ್ಷೇಪಗಳನ್ನು ಹರಾಜು ಮೂಲಕ ವಿಲೇಪಡಿಸಲು ಉದ್ದೇಶಿಸಲಾಗಿದೆ. ಈ ಹಿನ್ನೆಲೆ ತಹಶೀಲ್ದಾರ್ ಅವರು ಗಣಿಗಾರಿಕೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ – ನೆಹರೂ ರಸ್ತೆಯಲ್ಲಿ ಆಟೋ ಚಾಲಕನ ತಲೆಗೆ ದೊಣ್ಣೆಯಿಂದ ಹೊಡೆದ ಮತ್ತೊಬ್ಬ ಆಟೋ ಚಾಲಕ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200