ಶಿವಮೊಗ್ಗ ಲೈವ್.ಕಾಂ | BHADRAVATHI NEWS | 29 ಜುಲೈ 2020

ಎರಡು ಆಲೆಮನೆಗಳ ಮೇಲೆ ದಿಢೀರ್ ದಾಳಿ ನಡೆಸಿದ ತಹಶೀಲ್ದಾರ್ ನೇತೃತ್ವದ ತಂಡ, ಪ್ರಕರಣ ದಾಖಲಿಸಿದೆ. ಸಕ್ಕರೆ ಬಳಸಿ ಬೆಲ್ಲ ತಯಾರಿಸುತ್ತಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಕೂಡ್ಲಿಗೆರೆ ಹೋಬಳಿಯ ಅರಳಿಹಳ್ಳಿ ಮತ್ತು ಕಾಗೆಹಳ್ಳ ಗ್ರಾಮದ ಎರಡು ಆಲೆಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕಬ್ಬು ಬಳಸಿ ಬೆಲ್ಲ ತಯಾರಿಸಬೇಕು. ಆದರೆ ಈ ಆಲೆ ಮನೆಗಳಲ್ಲಿ ಸಕ್ಕರೆ ಬಳಸಿ ಬೆಲ್ಲ ಸಿದ್ಧಪಡಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದರು.
ಒಂದು ಆಲೆಮನೆಯಲ್ಲಿ 150 ಮೂಟೆ ಸಕ್ಕರೆ, ಮತ್ತೊಂದರಲ್ಲಿ 70 ಮೂಟೆ ಸಕ್ಕರೆ ದಾಸ್ತಾನು ಇತ್ತು. ಇದನ್ನು ವಶಕ್ಕೆ ಪಡೆಯಲಾಗಿದ್ದು. ಆಲೆಮನೆಯನ್ನು ಸೀಜ್ ಮಾಡಿ, ಪ್ರಕರಣ ದಾಖಲಿಸಲಾಗಿದೆ.
ತಹಶೀಲ್ದಾರ್ ಶಿವಕುಮಾರ್, ಉಪ ತಹಶೀಲ್ದಾರ್ ಮಂಜಾನಾಯ್ಕ್, ಗ್ರಾಮಾಂತರ ಠಾಣೆ ಸಬ್ ಇನ್ಸ್ಪೆಕ್ಟರ್ ದೇವೇಂದ್ರಪ್ಪ ಸೇರಿದಂತೆ ಹಲವರು ದಾಳಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200