ಭದ್ರಾವತಿ ತಾಲೂಕು ಪಂಚಾಯಿತಿಯಲ್ಲಿ ಆಮಂತ್ರಣ ಪತ್ರಿಕೆ ಕಿರಿಕ್, ಅರ್ಧಕ್ಕೆ ನಿಂತು ಹೋಯ್ತು ಮೀಟಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI | 23 ಜನವರಿ 2020

ಸಮಾಜ ಕಲ್ಯಾಣ ಇಲಾಖೆಯ ನೂತನ ಕಟ್ಟಡ ಉದ್ಘಾಟನೆ ಆಹ್ವಾನ ಪತ್ರಿಕೆಯಲ್ಲಿ ಸದಸ್ಯರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ತಾಪಂ ಸ್ಥಾಯಿ ಸಮಿತಿ ಸದಸ್ಯರು ಆಶಾ ಶ್ರೀಧರ್ ನೇತೃತ್ವದಲ್ಲಿ ಸಭೆಯಿಂದ ಹೊರ ನಡೆದರು.

2019 readers copy new

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದೂದ್‌ಪೀರ್ ಜ.27ರಂದು ನಿಗದಿಪಡಿಸಿರುವ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಕೊಟ್ಟಾಗ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಲು ಮುಂದಾದ ದೂದ್‌ಪೀರ್ ಜತೆ ಸದಸ್ಯರು ಮಾತಿನ ಚಕಮಕಿ ನಡೆಸಿದರು. ಆಗ ಆಶಾ ಶ್ರೀಧರ್ ಜತೆ ಸದಸ್ಯರು ಸಭೆ ಬಹಿಷ್ಕರಿಸಿ ಹೊರನಡೆದರು. ಸಮಾಜ ಕಲ್ಯಾಣ ಇಲಾಖೆ ಕಟ್ಟಡ ಉದ್ಘಾಟನೆಗೆ ಸಂಬಂಧ ಮುದ್ರಿಸಿರುವ ಆಹ್ವಾನ ಪತ್ರಿಕೆ ಡಿಸಿ ಕಚೇರಿ ಸೂಚನೆ ಮೇರೆಗೆ ಸಿದ್ದವಾಗಿದೆ. ಇದರಲ್ಲಿ ಲೋಪವಾಗಿಲ್ಲ ಎಂದು ದೂದ್‌ಪೀರ್ ಸ್ಪಷ್ಟಪಡಿಸಿದರು. ಇಲಾಖೆಯ ಮತ್ತೊಬ್ಬ ಅಧಿಕಾರಿ ಕೃಷ್ಣಪ್ಪ ಆಗಮಿಸಿ ಆಹ್ವಾನ ಪತ್ರಿಕೆ ಕುರಿತಾಗಿನ ಗೊಂದಲ ನಿವಾರಿಸುವ ಪ್ರಯತ್ನ ಮಾಡಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Bhadravathi Taluk Panchayath Meeting witnessed the verbal spat over an invitation.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment