ಲಾರಿಯ ಚಕ್ರದಡಿ ಸಿಲುಕಿ ದಂಪತಿ ಸಾವು, ಹೇಗಾಯ್ತು ಘಟನೆ?

Published On : ಮಾರ್ಚ್ 31, 2026

Published By : ನಿತಿನ್‌ ಆರ್‌.ಕೈದೊಟ್ಲು 

ಭದ್ರಾವತಿ: ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಗ್ರಾಮದ ಬಳಿ ಭಾನುವಾರ ರಾತ್ರಿ ಮೆಕ್ಕೆಜೋಳ ತುಂಬಿದ್ದ ಲಾರಿಯ ಹಿಂಬದಿಯ ಚಕ್ರದಡಿ ಸಿಲುಕಿ ದಂಪತಿ (couple) ಮೃತಪಟ್ಟಿದ್ದಾರೆ.

ಇದನ್ನೂ ಓದಿ : ಆಯನೂರಿನಲ್ಲಿ ಬೈಕ್‌ ಕಳ್ಳತನ, ಹೇಗಾಯ್ತು ಘಟನೆ?

ಮೃತರನ್ನು ತರೀಕೆರೆ ತಾಲೂಕು ಹರವನಹಳ್ಳಿ ಗೌಳಿಗರ ಕ್ಯಾಂಪ್ ನಿವಾಸಿ ಬಾಬು (32) ಹಾಗೂ ಅವರ ಪತ್ನಿ ಸಾವಿತ್ರಿ (29) ಎಂದು ಗುರುತಿಸಲಾಗಿದೆ. ದಂಪತಿ ಶಿವಮೊಗ್ಗದ ಫುಡ್‌ಕೋರ್ಟ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಶಿವಮೊಗ್ಗದಲ್ಲೇ ನೆಲೆಸಿದ್ದ ಅವರು, ವಾರಕ್ಕೊಮ್ಮೆ ಸ್ವಗ್ರಾಮಕ್ಕೆ ಹೋಗುತ್ತಿದ್ದರು.

Bike-and-Truck-incident-at-HK-Junction-in-Bhadravathi-taluk

ಭಾನುವಾರ ರಾತ್ರಿ ಕೆಲಸ ಮುಗಿಸಿ ಬೈಕ್‌ನಲ್ಲಿ ತೆರಳುವಾಗ ಅಪಘಾತ ನಡೆದಿದೆ. ಶಿವಮೊಗ್ಗದಿಂದ ತರೀಕೆರೆ ಕಡೆ ತೆರಳುತ್ತಿದ್ದ ಲಾರಿಯ ಹಿಂಬದಿಯ ಚಕ್ರದಡಿ ಬೈಕ್ ಸಿಲುಕಿದೆ. ಬಾಬು ಸ್ಥಳದಲ್ಲೇ ಮೃತಪಟ್ಟರೆ, ಸಾವಿತ್ರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯ ಕೊನೆಯುಸಿರೆಳೆದಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 31, 2026

Leave a Comment