ಭದ್ರಾವತಿ: ಮಗನನ್ನು ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಹಿಂತಿರುಗುವಷ್ಟರಲ್ಲಿ ಮನೆಯಲ್ಲಿ ಚಿನ್ನಾಭರಣ, ನಗದು, ದುಬಾರಿ ವಾಚ್ ಕಳ್ಳತನವಾಗಿದೆ (Theft). ಭದ್ರಾವತಿಯ ಬಿ.ಹೆಚ್.ರಸ್ತೆಯ ಮೀನುಗಾರರ ಬೀದಿಯ ಬಾಲಕೃಷ್ಣ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
ಪುತ್ರನನ್ನು ರೈಲು ಹತ್ತಿಸಿ ಬರಲು ಬಾಲಕೃಷ್ಣ ಮತ್ತು ಅವರ ಪತ್ನಿ ರೈಲ್ವೆ ನಿಲ್ದಾಣಕ್ಕೆ ಹೋಗಿ ರಾತ್ರಿ 12 ಗಂಟೆಗೆ ಹೊತ್ತಿಗೆ ಮನೆಗೆ ಹಿಂತಿರುಗಿದ್ದರು. ಆಗ ಮನೆಯ ಒಳಗಿನಿಂದ ಲಾಕ್ ಆಗಿತ್ತು. ಬಾಗಿಲನ್ನು ಜೋರಾಗಿ ಒದ್ದು ಒಳಗೆ ಹೋದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಮೇಲ್ಛಾವಣಿಗೆ ಹಾಕಿದ್ದ ಶೀಟ್ ಮುರಿದು ಮನೆಯೊಳಗೆ ನುಗ್ಗಿರುವ ಕಳ್ಳರು, ಬೀರುವಿನ ಲಾಕರ್ ತೆರೆದಿದ್ದಾರೆ. 5 ಸಾವಿರ ರೂ. ನಗದು, 10 ಸಾವಿರ ರೂ. ಮೌಲ್ಯದ ವಾಚ್, ಚಿನ್ನಾಭರಣ ಸೇರಿ 1.02 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ನಿರ್ಮಾಣ ಹಂತದ ಸರ್ಕಾರಿ ನೌಕರರ ಭವನಕ್ಕೆ ಮಧ್ಯಾಹ್ನ ಬಂದ ಸೂಪರ್ವೈಸರ್ಗೆ ಕಾದಿತ್ತು ಶಾಕ್, ಆಗಿದ್ದೇನು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200