ಮಗನನ್ನು ರೈಲಿಗೆ ಹತ್ತಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಆಘಾತ, ಒಳಗಿಂದಲೇ ಲಾಕ್‌ ಆಗಿತ್ತು ಬಾಗಿಲು, ಆಗಿದ್ದೇನು?

ಭದ್ರಾವತಿ: ಮಗನನ್ನು ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಹಿಂತಿರುಗುವಷ್ಟರಲ್ಲಿ ಮನೆಯಲ್ಲಿ ಚಿನ್ನಾಭರಣ, ನಗದು, ದುಬಾರಿ ವಾಚ್‌ ಕಳ್ಳತನವಾಗಿದೆ (Theft). ಭದ್ರಾವತಿಯ ಬಿ.ಹೆಚ್‌.ರಸ್ತೆಯ ಮೀನುಗಾರರ ಬೀದಿಯ ಬಾಲಕೃಷ್ಣ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.

Arya-PU-College-Shimoga.

ಪುತ್ರನನ್ನು ರೈಲು ಹತ್ತಿಸಿ ಬರಲು ಬಾಲಕೃಷ್ಣ ಮತ್ತು ಅವರ ಪತ್ನಿ ರೈಲ್ವೆ ನಿಲ್ದಾಣಕ್ಕೆ ಹೋಗಿ ರಾತ್ರಿ 12 ಗಂಟೆಗೆ ಹೊತ್ತಿಗೆ ಮನೆಗೆ ಹಿಂತಿರುಗಿದ್ದರು. ಆಗ ಮನೆಯ ಒಳಗಿನಿಂದ ಲಾಕ್‌ ಆಗಿತ್ತು. ಬಾಗಿಲನ್ನು ಜೋರಾಗಿ ಒದ್ದು ಒಳಗೆ ಹೋದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಮೇಲ್ಛಾವಣಿಗೆ ಹಾಕಿದ್ದ ಶೀಟ್‌ ಮುರಿದು ಮನೆಯೊಳಗೆ ನುಗ್ಗಿರುವ ಕಳ್ಳರು, ಬೀರುವಿನ ಲಾಕರ್‌ ತೆರೆದಿದ್ದಾರೆ. 5 ಸಾವಿರ ರೂ. ನಗದು, 10 ಸಾವಿರ ರೂ. ಮೌಲ್ಯದ ವಾಚ್‌, ಚಿನ್ನಾಭರಣ ಸೇರಿ 1.02 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಭದ್ರಾವತಿ ನ್ಯೂ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ನಿರ್ಮಾಣ ಹಂತದ ಸರ್ಕಾರಿ ನೌಕರರ ಭವನಕ್ಕೆ ಮಧ್ಯಾಹ್ನ ಬಂದ ಸೂಪರ್‌ವೈಸರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 5, 2025 at 9:00 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 5, 2025

Leave a Comment