ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಮಗನನ್ನು ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಹಿಂತಿರುಗುವಷ್ಟರಲ್ಲಿ ಮನೆಯಲ್ಲಿ ಚಿನ್ನಾಭರಣ, ನಗದು, ದುಬಾರಿ ವಾಚ್ ಕಳ್ಳತನವಾಗಿದೆ (Theft). ಭದ್ರಾವತಿಯ ಬಿ.ಹೆಚ್.ರಸ್ತೆಯ ಮೀನುಗಾರರ ಬೀದಿಯ ಬಾಲಕೃಷ್ಣ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.

ಪುತ್ರನನ್ನು ರೈಲು ಹತ್ತಿಸಿ ಬರಲು ಬಾಲಕೃಷ್ಣ ಮತ್ತು ಅವರ ಪತ್ನಿ ರೈಲ್ವೆ ನಿಲ್ದಾಣಕ್ಕೆ ಹೋಗಿ ರಾತ್ರಿ 12 ಗಂಟೆಗೆ ಹೊತ್ತಿಗೆ ಮನೆಗೆ ಹಿಂತಿರುಗಿದ್ದರು. ಆಗ ಮನೆಯ ಒಳಗಿನಿಂದ ಲಾಕ್ ಆಗಿತ್ತು. ಬಾಗಿಲನ್ನು ಜೋರಾಗಿ ಒದ್ದು ಒಳಗೆ ಹೋದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಮೇಲ್ಛಾವಣಿಗೆ ಹಾಕಿದ್ದ ಶೀಟ್ ಮುರಿದು ಮನೆಯೊಳಗೆ ನುಗ್ಗಿರುವ ಕಳ್ಳರು, ಬೀರುವಿನ ಲಾಕರ್ ತೆರೆದಿದ್ದಾರೆ. 5 ಸಾವಿರ ರೂ. ನಗದು, 10 ಸಾವಿರ ರೂ. ಮೌಲ್ಯದ ವಾಚ್, ಚಿನ್ನಾಭರಣ ಸೇರಿ 1.02 ಲಕ್ಷ ರೂ. ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ನಿರ್ಮಾಣ ಹಂತದ ಸರ್ಕಾರಿ ನೌಕರರ ಭವನಕ್ಕೆ ಮಧ್ಯಾಹ್ನ ಬಂದ ಸೂಪರ್ವೈಸರ್ಗೆ ಕಾದಿತ್ತು ಶಾಕ್, ಆಗಿದ್ದೇನು?

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






