ಭದ್ರಾವತಿ: ಮೊಬೈಲ್ ಸರ್ವಿಸ್ ಸೆಂಟರ್ ಒಂದರ ಬಾಗಿಲಿನ ಬೀಗ ಒಡೆದು ಮೊಬೈಲ್ ಫೋನ್ಗಳು, ಇಯರ್ ಬಡ್ಸ್, ಸ್ಮಾರ್ಟ್ ವಾಚ್ಗಳು ಸೇರಿ ಹಲವು ವಸ್ತುಗಳು ಕಳ್ಳತನವಾಗಿವೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಯಡೇಹಳ್ಳಿ ಸರ್ಕಲ್ನಲ್ಲಿರುವ ಎನ್.ಎಸ್.ಮೊಬೈಲ್ ಸರ್ವಿಸ್ ಪಾಯಿಂಟ್ನಲ್ಲಿ ಕಳ್ಳತನವಾಗಿದೆ. ಮಾಲೀಕ ನ್ಯಾಮತುಲ್ಲಾ ಅವರು ಎಂದಿನಂತೆ ಬೆಳಗ್ಗೆ 10.30ಕ್ಕೆ ಅಂಗಡಿ ಬಾಗಿಲು ತೆರೆಯಲು ಬಂದಾಗ ಬೀಗ ಮುರಿದಿರುವುದು ಗೊತ್ತಾಗಿದೆ. ಪರಿಶೀಲಿಸಿದಾಗ ₹76,500 ಮೌಲ್ಯದ ವಸ್ತುಗಳು ಕಳ್ಳತನವಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ರಿಪೇರಿಗೆ ಬಂದಿದ್ದ 8 ಹಳೆಯ ಮೊಬೈಲ್ ಫೋನ್ಗಳು, 15 ಕೀ ಪ್ಯಾಡ್ ಮೊಬೈಲ್ ಫೋನುಗಳು, 20 ನೆಕ್ ಬ್ಯಾಂಡ್, 30 ಇಯರ್ ಬಡ್ಸ್, 15 ಸ್ಮಾರ್ಟ್ ವಾಚುಗಳು, ಮಾನಿಟರ್, ₹6000 ನಗದು ಕಳ್ಳತನವಾಗಿವೆ ಎಂದು ಆರೋಪಿಸಲಾಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಟ್ಯಾಂಕರ್ ಡಿಕ್ಕಿ, ಅರಣ್ಯ ಕಾವಲುಗಾರ ಸಾವು, ಎಲ್ಲಿ? ಹೇಗಾಯ್ತು ಘಟನೆ?
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






