SHIVAMOGGA LIVE NEWS | 11 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಅದೇ ಗ್ರಾಮದ ಯುವಕನನ್ನು ಬಂಧಿಸಲಾಗಿದೆ. ಹಣ, ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ತಾಲೂಕು ರಬ್ಬರ್ ಕಾಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಜನವರಿ 13ರಂದು ರಬ್ಬರ್ ಕಾಡು ಗ್ರಾಮದ ನಿವಾಸಿಯೊಬ್ಬರು ತಮ್ಮ ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಮನೆಗೆ ಬಂದಾಗ ಬಾಗಿಲು ಬೀಗ ಮುರಿದಿರುವುದು ಗೊತ್ತಾಗಿದೆ.
ಲಕ್ಷ ಲಕ್ಷ ನಾಪತ್ತೆಯಾಗಿತ್ತು
ಮನೆಯ ಅಲ್ಮೆರಾದಲ್ಲಿದ್ದ 6 ಲಕ್ಷ ರೂ. ನಗದು, 5.66 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿತ್ತು. ಈ ಸಂಬಂಧ ಪೇಪರ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.
ಅದೇ ಊರಲ್ಲಿದ್ದ ಕಳ್ಳ
ಘಟನೆ ಸಂಬಂಧ ತನಿಖೆ ಕೈಗೊಂಡಿದ್ದ ಪೊಲೀಸರು ರಬ್ಬರ್ ಕಾಡು ಗ್ರಾಮದ ಚೇತನ್ (27) ಎಂಬಾತನನ್ನು ಬಂಧಿಸಿದ್ದಾರೆ. ಆತನಿಂದ 5.60 ಲಕ್ಷ ರೂ. ಹಣ, 6.43 ಲಕ್ಷ ಮೌಲ್ಯದ 134.44 ಗ್ರಾಂ ತೂಕದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗಕ್ಕೆ ಡಿಜಿಪಿ ಅಲೋಕ್ ಕುಮಾರ್, ಕೇಂದ್ರ ಕಾರಾಗೃಹಕ್ಕೆ ಭೇಟಿ

- ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿದ ವ್ಯಕ್ತಿ ಸಾವು, ಎರಡು ಭಾಗವಾದ ದೇಹ

- ಒಂದು ಮೆಸೇಜ್, ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ₹6.50 ಲಕ್ಷ ಮಾಯ, ಏನಿತ್ತು ಮೆಸೇಜ್ನಲ್ಲಿ?

- ಸಂಸದ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ, ಆಗಿದ್ದೇನು?

- ಅರಬಿಳಚಿ ದುರಂತ, ಭದ್ರಾ ನಾಲೆಯಲ್ಲಿ ಎರಡನೇ ಮೃತದೇಹ ಪತ್ತೆ

About The Editor
ನಿತಿನ್ ಆರ್.ಕೈದೊಟ್ಲು






