ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Published On : ಮಾರ್ಚ್ 29, 2026

Published By : ನಿತಿನ್‌ ಆರ್‌.ಕೈದೊಟ್ಲು 

Sunrise Facility Services, Sri sai Trust Shimoga

ಭದ್ರಾವತಿ: ತಾಲೂಕಿನ ನಗತಿಬೆಳಗಲು ತಾಂಡಾದಲ್ಲಿ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು (thieves) ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ನಡೆದಿದೆ. ಮನೆಯವರೆಲ್ಲ ಮದುವೆ ಸಮಾರಂಭಕ್ಕೆ ಹೋಗಿದ್ದ ಸಂದರ್ಭ ಈ ಕಳ್ಳತನ ನಡೆದಿದೆ.

ಹೇಗಾಯ್ತು ಘಟನೆ?

ಮಂಜುಳಾಬಾಯಿ ಅವರು ಮಾರ್ಚ್ 22ರಂದು ಮಗನೊಂದಿಗೆ ಚನ್ನಗಿರಿಯಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದರು. ಮಾರ್ಚ್ 25ರಂದು ಮಧ್ಯಾಹ್ನ ಮನೆಗೆ ವಾಪಸ್ ಬಂದು ನೋಡಿದಾಗ, ಹಿಂಬಾಗಿಲಿನ ಚಿಲಕ ಮುರಿದಿರುವುದು ಕಂಡುಬಂದಿದೆ.

Bhadravathi News Graphics

ಒಳಗೆ ಹೋಗಿ ಪರಿಶೀಲಿಸಿದಾಗ ಬೀರುವಿನಲ್ಲಿದ್ದ ಸುಮಾರು 25 ಗ್ರಾಂ ಚಿನ್ನದ ತಾಳಿ ಮತ್ತು ನೆಕ್ಲೇಸ್, 70 ಗ್ರಾಂ ಬೆಳ್ಳಿಯ ಕಾಲುಗೆಜ್ಜೆ ಹಾಗೂ ₹40,000 ನಗದು ಕಳುವಾಗಿರುವುದು ಬೆಳಕಿಗೆ ಬಂದಿದೆ. ಒಟ್ಟು 1.45 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಕಳುವಾಗಿವೆ ಎಂದು ಆರೋಪಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 29, 2026

Leave a Comment