ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 FEBRURARY 2023
BHADRAVATHI : ಭದ್ರಾವತಿ ಬಂದ್ ಹಿನ್ನೆಲೆ ವಿಐಎಸ್ಎಲ್ ಕಾರ್ಮಿಕರು ಪ್ರತಿಭಟನೆ ಆರಂಭಿಸಿದ್ದಾರೆ. ನಗರದ ಪ್ರಮುಖ ವೃತ್ತಗಳನ್ನು ಬಂದ್ ಮಾಡಿರುವುದರಿಂದ ಸಂಚಾರ ದಟ್ಟಣೆ (Traffic Jam) ಉಂಟಾಗಿದೆ. ಶಾಲೆ, ಕಾಲೇಜು, ಕಚೇರಿಗೆ ತೆರಳುವವರಿಗೆ ಬಂದ್ ಬಿಸಿ ತಟ್ಟಿದೆ.

ನಗರದ ಬಸ್ ನಿಲ್ದಾಣ, ಡಾ. ಅಂಬೇಡ್ಕರ್ ವೃತ್ತ, ರಂಗಪ್ಪ ಸರ್ಕಲ್ ಗಳಲ್ಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಈ ಸರ್ಕಲ್ ಗಳಲ್ಲಿ ಕಾರ್ಮಿಕರು ಗುಂಪುಗೂಡಿದ್ದರಿಂದ ವಾಹನ ಸಂಚಾರ ಕಷ್ಟವಾಗಿತ್ತು. ಇದರಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಇದನ್ನೂ ಓದಿ – ಭದ್ರಾವತಿ ಬಂದ್, ಸರ್ಕಲ್ ನಲ್ಲಿ ಟೈರ್ ಗೆ ಬೆಂಕಿ, ಹೇಗಿದೆ ಸದ್ಯದ ಪರಿಸ್ಥಿತಿ?
ಭದ್ರಾವತಿ ಹೊಸ ಸೇತುವೆ ಮೇಲೆ ಟ್ರಾಫಿಕ್ ಜಾಮ್ (Traffic Jam) ಉಂಟಾಗಿತ್ತು. ಕಚೇರಿಗಳಿಗೆ ತೆರಳುವವರು, ಶಾಲೆ, ಕಾಲೇಜುಗೆ ಹೋಗುವವರಿಗೆ ಬಂದ್ ಬಿಸಿ ತಟ್ಟಿತು. ಇನ್ನು, ಸಂಚಾರ ದಟ್ಟಣೆ ನಡುವೆ ಸಿಲುಕಿದ್ದ ಆಂಬುಲೆನ್ಸ್ ಗಳಿಗೆ ಕಾರ್ಮಿಕರೆ ದಾರಿ ಮಾಡಿಕೊಟ್ಟು ಮಾನವೀಯತೆ ಮೆರೆದರು.

LATEST NEWS
- BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್ ಸಾವು

- ಡಿ.ಬಿ.ಹಳ್ಳಿ ಕ್ರಾಸ್ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್, ಆಗಿದ್ದೇನು?

- ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

- ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್ ಬಾಟಲಿಯಿಂದ ಅಟ್ಯಾಕ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

About The Editor
ನಿತಿನ್ ಆರ್.ಕೈದೊಟ್ಲು















