ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ ಕೇಸ್‌, ಚಿತ್ರದುರ್ಗದ ಇಬ್ಬರು ಅರೆಸ್ಟ್‌, ಆರೋಪಿಗಳ ಹಿನ್ನೆಲೆ ಏನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 AUGUST 2023

HOLEHONNURU : ಗಾಂಧಿ ಪ್ರತಿಮೆ (Gandiji Statue) ಧ್ವಂಸ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಚಿತ್ರದುರ್ಗ ಜಿಲ್ಲೆಯವರು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಸುದಿಗೋಷ್ಠಿ ನಡೆಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಚಿತ್ರದುರ್ಗ ಜಿಲ್ಲೆಯ ಪಂಡರಹಳ್ಳಿಯ ಗಣೇಶ್‌ (24) ಮತ್ತು ವಿನಯ್‌ (25) ಬಂಧಿತರು.

ಇದನ್ನೂ ಓದಿ – ಹೊಳೆಹೊನ್ನೂರು ಗಾಂಧಿ ಪ್ರತಿಮೆ ಧ್ವಂಸ, ಸಿಎಂ ಸಿದ್ದರಾಮಯ್ಯ ಆಕ್ರೋಶ

ಆರೋಪಿಗಳು ಕೃಷಿ ಕೆಲಸ ಮಾಡಿಕೊಂಡಿದ್ದರು. ಇವರ ಕುರಿತು ಲಭ್ಯವಾಗಿದ್ದ ಸುಳಿವಿನ ಆಧಾರದಲ್ಲಿ ಪೊಲೀಸ್‌ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಆರೋಪಿಗಳು ಜೋಗಕ್ಕೆ ತೆರಳುವ ಮಾರ್ಗದಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸಗೊಳಿಸಿದ್ದರು. ದುಷ್ಕೃತ್ಯ ಎಸಗಿರುವ ಆರೋಪಿಗಳ ಹಿನ್ನೆಲೆ ಕುರಿತು ತನಿಖೆ ನಡೆಯುತ್ತಿದೆ. ಆರೋಪಿಗಳ ಪತ್ತೆಗಾಗಿ 50 ಜನರ ವಿಶೇಷ ತಂಡ ರಚಿಸಲಾಗಿತ್ತು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದರು.

Holehonnuru Gandhi Statue Vandalized issue

ಹೊಳೆಹೊನ್ನೂರಿನ ಗಾಂಧಿ ಸರ್ಕಲ್‌ನಲ್ಲಿದ್ದ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಯನ್ನು ಆ.20ರ ತಡರಾತ್ರಿ ದುಷ್ಕರ್ಮಿಗಳು ಧ್ವಂಸ ಮಾಡಿದ್ದರು. ಆ.21ರ ಬೆಳಗ್ಗೆ ವಿಷಯ ಗೊತ್ತಾಗುತ್ತಿದ್ದಂತೆ ಹೊಳೆಹೊನ್ನೂರಿನಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ರಸ್ತೆ ತಡೆ ಮಾಡಿದ್ದರು. ಘಟನೆ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದರು.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment