SHIVAMOGGA LIVE | 28 MAY 2023
SHIMOGA : ಪ್ರಮುಖ ಸೂಚನೆಗಳನ್ನು ಸಿಬ್ಬಂದಿಗೆ ನೀಡಲು ವಿವಿಧ ಇಲಾಖೆ, ಸರ್ಕಾರಿ ಸಂಸ್ಥೆಗಳಲ್ಲಿ ಪ್ರತಿದಿನ ಒಂದಿಲ್ಲೊಂದು ಸುತ್ತೋಲೆ (Circular) ಹೊರಡಿಸಲಾಗುತ್ತದೆ. ಅದರೆ ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ತಮ್ಮ ಮಗಳ ಹುಟ್ಟಹಬ್ಬದ ಔತಣಕೂಟಕ್ಕೆ ಸುತ್ತೋಲೆ ಹೊರಡಿಸಿದ್ದಾರೆ. ಇದು ಚರ್ಚೆಗೆ ಕಾರಣವಾಗಿದೆ.
ಪ್ರೊ. ಬಿ.ಪಿ.ವೀರಭದ್ರಪ್ಪ ಅವರ ಮಗಳ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ವಿವಿಯ ಅಧ್ಯಾಪಕರು, ಅಧ್ಯಾಪಕೇತರ ನೌಕರರು, ಅತಿಥಿ ಉಪನ್ಯಾಸಕರು, ಏಜೆನ್ಸಿ ನೌಕರರನ್ನು ಆಹ್ವಾನಿಸಿದ್ದಾರೆ. ಇದಕ್ಕಾಗಿ ಆಮಂತ್ರಣ ಪತ್ರಿಕೆ ಬದಲು ಸುತ್ತೋಲೆ (Circular) ಹೊರಡಿಸಿದ್ದಾರೆ. ಮೇ 22ರಂದು ಸುತ್ತೋಲೆ ಹೊರಡಿಸಲಾಗಿದೆ. ಮೇ 28ರಂದು ಮಧ್ಯಾಹ್ನ 12.30ಕ್ಕೆ ಸಂತೋಷ ಕೂಟದಲ್ಲಿ ಎಲ್ಲರು ಪಾಲ್ಗೊಳ್ಳುವಂತೆ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಸೆಂಟ್ರಲ್ ಜೈಲ್ ಮೇಲೆ ದಿಢೀರ್ ದಾಳಿ ನಡೆಸಿದ ಪೊಲೀಸರು
ವಿಶ್ವವಿದ್ಯಾಲಯ ಆಡಳಿತ, ನೀತಿ, ನಿಯಮಗಳ ಪಾಲನೆ, ನಡಾವಳಿ ಕುರಿತು ಸಿಬ್ಬಂದಿಗೆ ಸೂಚನೆ ನೀಡಲು ಸುತ್ತೋಲೆ ಹೊರಡಿಸಬೇಕು. ಆದರೆ ಪ್ರೊ. ಬಿ.ಪಿ.ವೀರಭದ್ರಪ್ಪ ಅವರು ವೈಯಕ್ತಿಕ ಕಾರ್ಯಕ್ರಮಕ್ಕೆ ಸುತ್ತೋಲೆ ಹೊರಡಿಸಿರುವುದು ಚರ್ಚೆ ಹುಟ್ಟುಹಾಕಿದೆ. ಇನ್ನು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರೊ. ಬಿ.ಪಿ.ವೀರಭದ್ರಪ್ಪ ಅವರು, ಅದು ಸುತ್ತೋಲೆಯಲ್ಲ ಆಹ್ವಾನವಷ್ಟೆ. ಈ ರೀತಿ ಮಾಹಿತಿ ನೀಡಲು ಅವಕಾಶವಿದೆ ಎಂದು ತಿಳಿಸಿದ್ದಾರೆ.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200