ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ವಿಜೃಂಭಣೆಯ ರಥೋತ್ಸವ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 17 ಡಿಸೆಂಬರ್ 2021

ಭದ್ರಾವತಿಯ ಹುತ್ತಾ ಕಾಲೋನಿಯಲ್ಲಿ ವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವರಿಗೆ ಹರಕೆ ತೀರಿಸಿ ಕೃಪೆಗೆ ಪಾತ್ರರಾದರು.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ರಥೋತ್ಸವದ ಅಂಗವಾಗಿ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಹೋಮ, ಹವನಗಳನ್ನು ಕೂಡ ಮಾಡಲಾಯಿತು. ಬಳಿಕ ಅಲಂಕೃತ ರಥದಲ್ಲಿ ದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ರಥೋತ್ಸವದ ವೇಳೆ ಭಕ್ತರು ಮೆಣಸು, ಬಾಳೆ ಹಣ್ಣನ್ನು ರಥದತ್ತ ತೂರಿ ಹರಕೆ ತೀರಿಸಿದರು. ಹಣ್ಣು, ಕಾಯಿ ಮಾಡಿಸಿ ದೇವರ ಆಶೀರ್ವಾದ ಪಡೆದರು. ಸರ್.ಎಂ.ವಿಶ್ವೇಶ್ವರಯ್ಯ ಆಟೋ ಚಾಲಕರ ಸಂಘದ ವತಿಯಿಂದ ಭಕ್ತರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿತ್ತು.

ಶಾಸಕ ಬಿ.ಕೆ.ಸಂಗಮೇಶ್ವರ, ನಗರಸಭೆ ಪೌರಾಯುಕ್ತ ಕೆ.ಪರಮೇಶ್, ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್, ಪ್ರಮುಖರಾದ ಶಾರದಾ ಅಪ್ಪಾಜಿ, ಹೆಚ್.ಸಿ.ದಾಸೇಗೌಡ, ಕರಿಯಪ್ಪ, ನಗರಸಭೆ ಸದಸ್ಯರಾದ ಮೋಹನ್ ಕುಮಾರ್, ಕಾಂತರಾಜ್, ಉಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್.ಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಎಸ್.ಎಂ.ಸುಧಾಮಣಿ, ಎಂ.ಎ.ಅಜಿತ್, ಗುಣಶೇಖರ್, ಚಂದ್ರಹಾಸ್ ಸೇರಿದಂತೆ ಹಲವರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

shivamogga live subscribe New Kannada

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment