ಭದ್ರಾವತಿಯಲ್ಲಿ ಶಿಕ್ಷಕನ ಪರ ಬೀದಿಗಿಳಿಯಿತು ಇಡೀ ಊರು, ರಸ್ತೆ ತಡೆದು ರಾಜಕಾರಣಿಗಳಿಗೆ ಹಿಡಿಶಾಪ ಹಾಕಿದ ಗ್ರಾಮಸ್ಥರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 SEPTEMBER 2023

BHADRAVATHI : ಮುಖ್ಯ ಶಿಕ್ಷಕರೊಬ್ಬರ ವರ್ಗಾವಣೆ (Transfer) ಖಂಡಿಸಿ ಗ್ರಾಮಸ್ಥರು ಶಾಲೆ ಮುಂಭಾಗ ಪ್ರತಿಭಟಿಸಿ (PROTEST), ರಸ್ತೆ ತಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಕೆಲಕಾಲ ಶಾಲೆ ಸಮೀಪ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಭದ್ರಾವತಿ ತಾಲೂಕು ಅರಳಿಹಳ್ಳಿ ಸರ್ಕಾರಿ ಪ್ರೌಢಶಾಲೆ (High School) ಮುಖ್ಯ ಶಿಕ್ಷಕ ಮೋತಿ ನಾಯ್ಕ್‌ ಅವರ ವರ್ಗಾವಣೆ ಖಂಡಿಸಿ ಪೋಷಕರು, ಗ್ರಾಮಸ್ಥರು, ಗ್ರಾಮ ಪಂಚಾಯಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜಕೀಯ ಒತ್ತಡ ಮತ್ತು ಅಧಿಕಾರಿಗಳು ಕುತಂತ್ರದಿಂದ ಶಿಕ್ಷಕ ಮೋತಿ ನಾಯ್ಕ್‌ ಅವರನ್ನು ವರ್ಗಾಯಿಸಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್‌ ಹತ್ತುವಾಗ ಕೀ ಕೆಳಗೆ ಬಿತ್ತು, ಎತ್ತಿಕೊಂಡ ನಂತರ ಹಿರಿಯ ನಾಗರಿಕನಿಗೆ ಕಾದಿತ್ತು ಶಾಕ್

ಬಿಗಿ ಪೊಲೀಸ್‌ ಬಂದೋಬಸ್ತ್‌

ಮುಖ್ಯ ಶಿಕ್ಷಕ ಮೋತಿ ನಾಯ್ಕ್‌ ಅವರನ್ನು ಶಿಕಾರಿಪುರ ತಾಲೂಕು ಸುರಗೀಹಳ್ಳಿ (Suragihalli) ಗ್ರಾಮದ ಪ್ರೌಢಶಾಲೆಗೆ ವರ್ಗಾಯಿಸಲಾಗಿದೆ. ಇದನ್ನು ಖಂಡಿಸಿ ಪೋಷಕರು ಮತ್ತು ಗ್ರಾಮಸ್ಥರು ಪ್ರತಿಭಟನೆಗೆ ಮುಂದಾದರು. ವಿಚಾರ ತಿಳಿದು ಪೊಲೀಸರು ಶಾಲೆ ಸಮೀಪ ಬಂದೋಬಸ್ತ್‌ ಕೈಗೊಂಡಿದ್ದರು. ಜನರನ್ನು ಶಾಲೆ ಆವರಣದೊಳಗೆ ತೆರಳದಂತೆ ಪೊಲೀಸರು ತಡೆದರು. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಶಾಲೆ ಮುಂಭಾಗ ಪ್ರತಿಭಟನೆ ನಡೆಸಿದರು. ಬಳಿಕ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬಸ್ಸಿಗಾಗಿ ಕಾದು ಕಾದು ನಿದ್ರೆಗೆ ಜಾರಿದ ಯುವಕ, ಎಚ್ಚರವಾದಾಗ ಕಾದಿತ್ತು ಆಘಾತ

ಸ್ಥಳಕ್ಕೆ ಶಿಕ್ಷಣಾಧಿಕಾರಿ ದೌಡು

ಅರಳಿಹಳ್ಳಿ ಶಾಲೆಯಲ್ಲಿ ಶೈಕ್ಷಣಿಕ ಚಟುವಟಿಕೆ ಉತ್ತಮವಾಗಿದ್ದು ಶಾಲೆಯ ಅಭಿವೃದ್ಧಿಗೆ ಮುಖ್ಯ ಶಿಕ್ಷಕ ಮೋತಿ ನಾಯ್ಕ್‌ ಅವರದ್ದು ಪ್ರಮುಖ ಪಾತ್ರ. ರಾಜಕೀಯ ಕಾರಣಕ್ಕಾಗಿ ಅವರನ್ನು ಬೇರೆಡೆ ವರ್ಗಾಯಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ವಿಚಾರ ತಿಳಿದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಸ್ಥಳಕ್ಕೆ ಭೇಟಿ ನೀಡಿ, ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಯತ್ನಿಸಿದರು. ಆಯುಕ್ತರ ಕಚೇರಿಯ ಆದೇಶದಂತೆ ವರ್ಗಾವಣೆಯಾಗಿದೆ ಎಂದು ತಿಳಿಸಿದರು. ಆದರೆ ಗ್ರಾಮಸ್ಥರು ಬಿಇಒ ಮಾತಿಗೆ ಬೆಲೆಕೊಡದೆ ಪ್ರತಿಭಟನೆ ಮುಂದುವರೆಸಿದರು.

Villagers Protest at aralehalli

ಇದನ್ನೂ ಓದಿ – ಗಣಪತಿ ಮುಂದೆ ಭರ್ಜರಿ ಡಾನ್ಸ್‌, ವಿಡಿಯೋ ವೈರಲ್‌, ಮನೆಗೆ ಬಂದರು ಪೊಲೀಸ್‌, ಏನಿದು ಕೇಸ್‌?

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಮ್ಮ, ಉಪಾಧ್ಯಕ್ಷೆ ಅನಿತಾ, ಸದಸ್ಯರಾದ ಪಾರ್ತೀಬನ್‌, ಪುಟ್ಟಪ್ಪ, ಕೋಮಲಮ್ಮ, ರುದ್ರೇಶ್‌, ಎಸ್‌ಡಿಎಂಸಿ ಅ‍ಧ್ಯಕ್ಷ ರಮೇಶ್‌, ಸದಸ್ಯರಾದ ಗುಡ್ಡದ ನೇರಳೇಕೆರೆ ಮೋಹನ್‌, ನಾಗರಾಜ್‌, ಕುಮಾರ್‌, ಅನಿತಾ, ಆಶಾ, ಮೋಹನ್‌ ಸೇರಿದಂತೆ ದೊಡ್ಡ ಸಂಖ್ಯೆಯ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 21, 2023

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

Leave a Comment