SHIVAMOGGA LIVE NEWS | 23 AUGUST 2023
BHADRAVATHI : ವಿಐಎಸ್ಎಲ್ ಕಾರ್ಖಾನೆಯಲ್ಲಿ ಉತ್ಪಾದನೆ ಪುನಾರಂಭವಾಗುವುದು ಖಚಿತವಾಗಿದೆ. ರೈಲಿನ ಮೂಲಕ ಕಚ್ಛಾ ವಸ್ತು ಬಂದಿದ್ದು ಕಾರ್ಖಾನೆಯನ್ನು ತಲುಪಿದೆ. ಆಡಳಿತ ಮಂಡಳಿ ಮತ್ತು ಕಾರ್ಮಿಕರು ಕಚ್ಛಾ ವಸ್ತುವಿಗೆ ವಿಶೇಷ ಪೂಜೆ ಸಲ್ಲಿಸಿ, ಕಾರ್ಖಾನೆಯ ಸಮಸ್ಯೆ ಪರಿಹಾರವಾಗಲಿ ಎಂದು ಪ್ರಾರ್ಥಿಸಿದರು.
![]() |
ಕಾರ್ಖಾನೆಗೆ ಬಂತು ಬ್ಲೂಮ್
ಉಕ್ಕು ಪ್ರಾಧಿಕಾರದ ಬಿಲಾಯ್ ಘಟಕದಿಂದ ವಿಐಎಸ್ಎಲ್ಗೆ ಕಚ್ಛಾ ವಸ್ತು ಪೂರೈಕೆ ಮಾಡಲಾಗಿದೆ. ಗೂಡ್ಸ್ ರೈಲಿನ 19 ವ್ಯಾಗನ್ಗಳಲ್ಲಿ ಬ್ಲೂಮ್ಗಳನ್ನು ರವಾನಿಸಲಾಗಿದೆ. ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಕಾರ್ಮಿಕರು ಬ್ಲೂಮ್ ತುಂಬಿಕೊಂಡು ಬಂದಿದ್ದ ವ್ಯಾಗನ್ಗೆ ಪೂಜೆ ಸಲ್ಲಿಸಿದರು.
ಇದನ್ನೂ ಓದಿ – ‘ಚಳಿಗಾಲದಲ್ಲಿ ಬಿಜೆಪಿ, ಬೇಸಿಗೆಯಲ್ಲಿ ಜೆಡಿಎಸ್, ಮಳೆಗಾಲದಲ್ಲಿ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ’, ಆಯನೂರು ವಿರುದ್ಧ ಗರಂ
ವಿಐಎಸ್ಎಲ್ ಮುಚ್ಚುವ ಆದೇಶದ ವಿರುದ್ಧ ಕಳೆದ 8 ತಿಂಗಳಿಂದ ಗುತ್ತಿಗೆ ಕಾರ್ಮಿಕರು ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಸೇಲ್ ಆಡಳಿತ ಮಂಡಳಿ ಕಾರ್ಖಾನೆ ಪುನಾರಂಭದ ಮಾಹಿತಿ ನೀಡಿತ್ತು. ಈಗ ಕಚ್ಛಾ ವಸ್ತು ಪೂರೈಕೆ ಮಾಡಲಾಗಿದೆ. ಇದರಿಂದ ಕಾರ್ಮಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಕಾರ್ಮಿಕರ ಸಮಸ್ಯೆ ಶಾಶ್ವತವಾಗಿ ಪರಿಹಾರ ಕಾಣದ ಹೊರತು ಹೋರಾಟ ನಿಲ್ಲಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200