ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 AUGUST 2023
BHADRAVATHI : ವಿಐಎಸ್ಎಲ್ ಕಾರ್ಖಾನೆಯಲ್ಲಿ ಉತ್ಪಾದನೆ ಪುನಾರಂಭವಾಗುವುದು ಖಚಿತವಾಗಿದೆ. ರೈಲಿನ ಮೂಲಕ ಕಚ್ಛಾ ವಸ್ತು ಬಂದಿದ್ದು ಕಾರ್ಖಾನೆಯನ್ನು ತಲುಪಿದೆ. ಆಡಳಿತ ಮಂಡಳಿ ಮತ್ತು ಕಾರ್ಮಿಕರು ಕಚ್ಛಾ ವಸ್ತುವಿಗೆ ವಿಶೇಷ ಪೂಜೆ ಸಲ್ಲಿಸಿ, ಕಾರ್ಖಾನೆಯ ಸಮಸ್ಯೆ ಪರಿಹಾರವಾಗಲಿ ಎಂದು ಪ್ರಾರ್ಥಿಸಿದರು.
ಕಾರ್ಖಾನೆಗೆ ಬಂತು ಬ್ಲೂಮ್
ಉಕ್ಕು ಪ್ರಾಧಿಕಾರದ ಬಿಲಾಯ್ ಘಟಕದಿಂದ ವಿಐಎಸ್ಎಲ್ಗೆ ಕಚ್ಛಾ ವಸ್ತು ಪೂರೈಕೆ ಮಾಡಲಾಗಿದೆ. ಗೂಡ್ಸ್ ರೈಲಿನ 19 ವ್ಯಾಗನ್ಗಳಲ್ಲಿ ಬ್ಲೂಮ್ಗಳನ್ನು ರವಾನಿಸಲಾಗಿದೆ. ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಕಾರ್ಮಿಕರು ಬ್ಲೂಮ್ ತುಂಬಿಕೊಂಡು ಬಂದಿದ್ದ ವ್ಯಾಗನ್ಗೆ ಪೂಜೆ ಸಲ್ಲಿಸಿದರು.
ಇದನ್ನೂ ಓದಿ – ‘ಚಳಿಗಾಲದಲ್ಲಿ ಬಿಜೆಪಿ, ಬೇಸಿಗೆಯಲ್ಲಿ ಜೆಡಿಎಸ್, ಮಳೆಗಾಲದಲ್ಲಿ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ’, ಆಯನೂರು ವಿರುದ್ಧ ಗರಂ
ವಿಐಎಸ್ಎಲ್ ಮುಚ್ಚುವ ಆದೇಶದ ವಿರುದ್ಧ ಕಳೆದ 8 ತಿಂಗಳಿಂದ ಗುತ್ತಿಗೆ ಕಾರ್ಮಿಕರು ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಸೇಲ್ ಆಡಳಿತ ಮಂಡಳಿ ಕಾರ್ಖಾನೆ ಪುನಾರಂಭದ ಮಾಹಿತಿ ನೀಡಿತ್ತು. ಈಗ ಕಚ್ಛಾ ವಸ್ತು ಪೂರೈಕೆ ಮಾಡಲಾಗಿದೆ. ಇದರಿಂದ ಕಾರ್ಮಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಕಾರ್ಮಿಕರ ಸಮಸ್ಯೆ ಶಾಶ್ವತವಾಗಿ ಪರಿಹಾರ ಕಾಣದ ಹೊರತು ಹೋರಾಟ ನಿಲ್ಲಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















