SHIVAMOGGA LIVE NEWS | 16 MARCH 2023
MYSORE : ವಿಐಎಸ್ಎಲ್ ಕಾರ್ಖಾನೆ ಉಳಿಸುವಂತೆ ಒತ್ತಾಯಿಸಿ ರಾಜ ಮನೆತನದ ಗಮನ ಸೆಳೆಯಲು ಭದ್ರಾವತಿಯ ವ್ಯಾಪಾರಿಯೊಬ್ಬರು ಮೈಸೂರಿನಲ್ಲಿ (Mysore) ಧರಣಿ ನಡೆಸಿದರು. ಗಾಂಧಿ ವೃತ್ತದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣೆ ಮಾಡಿದರು.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಭದ್ರಾವತಿಯ ವ್ಯಾಪಾರಿ ದಯಾನಂದ್ ಅವರು ಮೈಸೂರಿನಲ್ಲಿ (Mysore) ರಾಜಮನೆತನದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ. ಅವರ ಹೋರಾಟ ವಿಐಎಸ್ಎಲ್ ಕಾರ್ಮಿಕರು ಮತ್ತು ಭದ್ರವತಿಯಲ್ಲಿ ಜನ ಮೆಚ್ಚುಗೆ ಪಡೆದಿದೆ.
ಗಮನ ಸೆಳೆಯಲು ಕಾರಣವೇನು?
ವಿಐಎಸ್ಎಲ್ ಕಾರ್ಖಾನೆಯನ್ನ ಸ್ಥಾಪನೆ ಮಾಡಿದ್ದು ಮೈಸೂರಿನ ರಾಜ ಮನೆತನದವರು. ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್. ಎಂ.ವಿಶ್ವೇಶ್ವರಯ್ಯ ಅವರು ಕಾರ್ಖಾನೆಯನ್ನು ಆರಂಭಿಸಿದ್ದರು. ಲಕ್ಷಾಂತರ ಜನರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಉದ್ಯೋಗ ನೀಡಿದ್ದ ಕಾರ್ಖಾನೆ ಶತಮಾನೋತ್ಸವ ಆಚರಣೆ ಮಾಡಬೇಕಿತ್ತು. ಆದರೆ ಸರ್ಕಾರ ಕಾರ್ಖಾನೆ ಮುಚ್ಚಲು ಮುಂದಾಗಿದೆ. ಕಾರ್ಖಾನೆ ಪುನಶ್ಚೇತನ ಮಾಡಲು ರಾಜ ಮನೆತನದ ಗಮನ ಸೆಳೆಯಲು ದಯಾನಂದ್ ಅವರು ಮೈಸೂರಿನಲ್ಲಿ ಧರಣಿ ನಡೆಸಿದರು.
ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದರು
ವಿಐಎಸ್ಎಲ್ ಕಾರ್ಖಾನೆ ಉಳಿಸುವಂತೆ ಭದ್ರವತಿ ವ್ಯಾಪಾರಿ ದಯಾನಂದ್ ಅವರು ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಿದ್ದರು. ಕಾರ್ಖಾನೆಯನ್ನು ಪುನಾರಂಭ ಮಾಡಬೇಕು. ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ದಯಾನಂದ್ ಅವರು ಆಗ್ರಹಿಸಿದ್ದರು.
ಇದನ್ನೂ ಓದಿ – ಭದ್ರಾವತಿಯಲ್ಲಿ ಕಾರ್ಮಿಕರಿಂದ ವಿಐಎಸ್ಎಲ್ ಕಾರ್ಖಾನೆ ಅಪ್ಪಿಕೋ ಚಳವಳಿ
ಇದಕ್ಕೂ ಮೊದಲು ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ವಿಐಎಸ್ಎಲ್ ಉಳಿವಿಗಾಗಿ ಪ್ರಾರ್ಥಿಸಿ, ಕಾರ್ಮಿಕರು ಪೂಜೆ ಸಲ್ಲಿಸಿದರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP



