ಮೈಸೂರಿನಲ್ಲೂ VISL ಪರ ಧರಣಿ, ರಾಜ ಮನೆತನದ ಗಮನ ಸೆಳೆಯಲು ಯತ್ನ, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 16 MARCH 2023

MYSORE : ವಿಐಎಸ್ಎಲ್ ಕಾರ್ಖಾನೆ ಉಳಿಸುವಂತೆ ಒತ್ತಾಯಿಸಿ ರಾಜ ಮನೆತನದ ಗಮನ ಸೆಳೆಯಲು ಭದ್ರಾವತಿಯ ವ್ಯಾಪಾರಿಯೊಬ್ಬರು ಮೈಸೂರಿನಲ್ಲಿ (Mysore) ಧರಣಿ ನಡೆಸಿದರು. ಗಾಂಧಿ ವೃತ್ತದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣೆ ಮಾಡಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

VISL-protest-in-Mysore-near-Palace

ಭದ್ರಾವತಿಯ ವ್ಯಾಪಾರಿ ದಯಾನಂದ್ ಅವರು ಮೈಸೂರಿನಲ್ಲಿ (Mysore) ರಾಜಮನೆತನದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ. ಅವರ ಹೋರಾಟ ವಿಐಎಸ್ಎಲ್ ಕಾರ್ಮಿಕರು ಮತ್ತು ಭದ್ರವತಿಯಲ್ಲಿ ಜನ ಮೆಚ್ಚುಗೆ ಪಡೆದಿದೆ.

ಗಮನ ಸೆಳೆಯಲು ಕಾರಣವೇನು?

ವಿಐಎಸ್ಎಲ್ ಕಾರ್ಖಾನೆಯನ್ನ ಸ್ಥಾಪನೆ ಮಾಡಿದ್ದು ಮೈಸೂರಿನ ರಾಜ ಮನೆತನದವರು. ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್. ಎಂ.ವಿಶ್ವೇಶ್ವರಯ್ಯ ಅವರು ಕಾರ್ಖಾನೆಯನ್ನು ಆರಂಭಿಸಿದ್ದರು. ಲಕ್ಷಾಂತರ ಜನರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಉದ್ಯೋಗ ನೀಡಿದ್ದ ಕಾರ್ಖಾನೆ ಶತಮಾನೋತ್ಸವ ಆಚರಣೆ ಮಾಡಬೇಕಿತ್ತು. ಆದರೆ ಸರ್ಕಾರ ಕಾರ್ಖಾನೆ ಮುಚ್ಚಲು ಮುಂದಾಗಿದೆ. ಕಾರ್ಖಾನೆ ಪುನಶ್ಚೇತನ ಮಾಡಲು ರಾಜ ಮನೆತನದ ಗಮನ ಸೆಳೆಯಲು ದಯಾನಂದ್ ಅವರು ಮೈಸೂರಿನಲ್ಲಿ ಧರಣಿ ನಡೆಸಿದರು.

ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದರು

ವಿಐಎಸ್ಎಲ್ ಕಾರ್ಖಾನೆ ಉಳಿಸುವಂತೆ ಭದ್ರವತಿ ವ್ಯಾಪಾರಿ ದಯಾನಂದ್ ಅವರು ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಿದ್ದರು. ಕಾರ್ಖಾನೆಯನ್ನು ಪುನಾರಂಭ ಮಾಡಬೇಕು. ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ದಯಾನಂದ್ ಅವರು ಆಗ್ರಹಿಸಿದ್ದರು.

ಇದನ್ನೂ ಓದಿ – ಭದ್ರಾವತಿಯಲ್ಲಿ ಕಾರ್ಮಿಕರಿಂದ ವಿಐಎಸ್ಎಲ್ ಕಾರ್ಖಾನೆ ಅಪ್ಪಿಕೋ ಚಳವಳಿ

ಇದಕ್ಕೂ ಮೊದಲು ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ವಿಐಎಸ್ಎಲ್ ಉಳಿವಿಗಾಗಿ ಪ್ರಾರ್ಥಿಸಿ, ಕಾರ್ಮಿಕರು ಪೂಜೆ ಸಲ್ಲಿಸಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment