VISL ಕಾರ್ಮಿಕರಿಗೆ ಗುಡ್‌ ನ್ಯೂಸ್‌ ನೀಡಿದ ಸಂಸದ, ಉತ್ಪಾದನಾ ಚುಟುವಟಿಕೆ ಪುನಾರಂಭಕ್ಕೆ ದಿನಾಂಕ ಫಿಕ್ಸ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

SHIVAMOGGA LIVE | 1 AUGUST 2023

BHADRAVATHI : ವಿಐಎಸ್‌ಎಲ್‌ ಕಾರ್ಖಾನೆಯಲ್ಲಿ (VISL) ಉತ್ಪಾದನಾ ಚಟುವಟಿಕೆ ಪುನಾರಂಭಕ್ಕೆ ಸೇಲ್‌ ಆಡಳಿತ ಮಂಡಳಿ ಅನುಮತಿ ನೀಡಿದೆ. ಆ.10ರಿಂದ ಬಾರ್‌ ಮಿಲ್‌ ಕೆಲಸ ಆರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

BY-Raghavendra-and-Bhadravathi-VISL

ಕೇಂದ್ರ ಗೃಹ ಸಚಿವ ಅಮಿತ್‌ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ನಿರ್ದೇಶನದ ಬಳಿಕ ಸೇಲ್‌ ಆಡಳಿತ ಮಂಡಳಿ ವಿಐಎಸ್‌ಎಲ್‌ (VISL) ಕಾರ್ಖಾನೆಯಲ್ಲಿ ಉತ್ಪಾದನಾ ಚುಟವಟಿಕೆ ಪುನಾರಂಭ ಮಾಡಲು ಮುಂದಾಗಿದೆ. ಆ.10ರಿಂದ ಬಾರ್‌ ಮಿಲ್‌ನಲ್ಲಿ ಉತ್ಪಾದನೆ ಶುರುವಾಗಲಿದೆ. ಮುಂದೆ ಪ್ರಾಥಮಿಕ ಗಿರಣಿ ಪುನರಾರಂಭವಾಗಲಿದೆ ಎಂದು ತಿಳಿಸಿದ್ದಾರೆ.

ವಿಐಎಸ್‌ಎಲ್‌ ಕಾರ್ಖಾನೆಯನ್ನು ನಂಬಿಕೊಂಡಿರುವ ಉದ್ಯೋಗಿಗಳಿಗೆ, ಭದ್ರಾವತಿಯ ಜನರ ಪಾಲಿಗೆ ಇದು ಮಹತ್ವದ ನಿರ್ಧಾರ ಎಂದುಕೊಂಡಿದ್ದೇನೆ. ಕೇಂದ್ರ ಸರ್ಕಾರ, ಸಂಬಂಧಿಸಿದ ಸಚಿವರ ನಿರಂತರ ಪ್ರಯತ್ನದ ಫಲವಾಗಿ ಸೇಲ್‌ ಆಡಳಿತ ಮಂಡಳಿ ಪ್ರಮುಖ ನಿರ್ಧಾರ ಕೈಗೊಂಡಿದೆ. ಇದಕ್ಕಾಗಿ ದಣಿವರಿಯದೆ ಕೆಲಸ ಮಾಡಿದ್ದೇವೆ.ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ

ಇದನ್ನೂ ಓದಿ – VISL ಕಾರ್ಮಿಕರ ಜೊತೆ ಸಂಸದ ರಾಘವೇಂದ್ರ ಮಹತ್ವದ ಮೀಟಿಂಗ್‌, ಏನೆಲ್ಲ ಹೇಳಿದರು?

ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಈತನಕ ತಾಳ್ಮೆಯಿಂದ ಸಹಕರಿಸಿದ ವಿಐಎಸ್‌ಎಲ್‌ ನೌಕರರು, ಕಾರ್ಮಿಕ ಸಂಘಟನೆ ಮುಖಂಡರು, ಜನಪ್ರತಿನಿಧಿಗಳಿಗೆ ಸಂಸದ ರಾಘವೇಂದ್ರ ಧನ್ಯವಾದ ತಿಳಿಸಿ ಪ್ರಕಟಣೆ ಹೊರಡಿಸಿದ್ದಾರೆ.

PARISHRAMA

Leave a Comment