ಕುಮಾರಸ್ವಾಮಿಗೆ ಉಕ್ಕು ಖಾತೆ, ಭದ್ರಾವತಿಯಲ್ಲಿ ಚಿಗುರೊಡೆದ ನಿರೀಕ್ಷೆ, ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 10 JUNE 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

BHADRAVATHI : ನರೇಂದ್ರ ಮೋದಿ ಕ್ಯಾಬಿನೆಟ್‌ನಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ (Minister Of Steel) ಲಭಿಸಿದೆ. ಇದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ (ವಿಐಎಸ್‌ಎಲ್) ನೌಕರರಲ್ಲಿ ಸಂತಸ ಮೂಡಿಸಿದೆ. ಕಾರ್ಖಾನೆ ಪುನಶ್ಚೇತನದ ನಿರೀಕ್ಷೆ ಗರಿಗೆದರಿದೆ.

ಭದ್ರಾವತಿಯ ವಿಐಎಸ್‌ಎಲ್‌ ಕಾರ್ಖಾನೆಯನ್ನು ನಿರ್ವಹಿಸುತ್ತಿರುವ ಭಾರತೀಯ ಉಕ್ಕು ಪ್ರಾಧಿಕಾರವು ಉಕ್ಕು ಸಚಿವಾಲಯದ ಅಡಿ ಕಾರ್ಯನಿರ್ವಹಿಸುತ್ತದೆ. ‌ಈಗ ಹೆಚ್‌.ಡಿ.ಕುಮಾರಸ್ವಾಮಿ ಇದೇ ಉಕ್ಕು ಖಾತೆಯ ಸಚಿವರಾಗಿದ್ದಾರೆ.

ನೂತನ ಸಚಿವರಿಗೆ ಎಲ್ಲವು ಗೊತ್ತು

ವಿಐಎಸ್‌ಎಲ್‌ ಕಾರ್ಖಾನೆ ಪುನಶ್ಚೇತನ, ಕಾರ್ಮಿಕರ ಸಮಸ್ಯೆಗಳ ಕುರಿತು ನೂತನ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಎಲ್ಲ ವಿಚಾರಗಳು ಗೊತ್ತಿದೆ. ಈ ಹಿಂದೆ ಹಲವು ಬಾರಿ ಕಾರ್ಮಿಕರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ತಿಳಿಸಿದ್ದರು.

ಕುಮಾರಸ್ವಾಮಿ ಅವರಿಗೆ ಉಕ್ಕು ಖಾತೆ ನೀಡಿರುವುದು ತುಂಬಾ ಖುಷಿಯಾಗಿದೆ. ಈ ಹಿಂದೆ ವಿಐಎಸ್‌ಎಲ್‌ ಕಾರ್ಮಿಕರು ಅವರನ್ನು ಭೇಟಿಯಾಗಿ ಕಾರ್ಖಾನೆ ಪುನಶ್ಚೇತನದ ಕುರಿತು ಚರ್ಚೆ ನಡೆಸಿದ್ದೆವು. ಈಗ ಅವರು ಅಗತ್ಯ ಬಂಡವಾಳ ಹೂಡಿಕೆ ಮಾಡುತ್ತಾರೆ ಎಂಬ ನಂಬಿಕೆ ಇದೆ. ಸಂಸದ ರಾಘವೇಂದ್ರ ಅವರ ಕಾರಣದಿಂದ ಕಳೆದ ಕೆಲವು ವರ್ಷದಿಂದ ಕಾರ್ಖಾನೆ ಚಾಲನೆಯಲ್ಲಿತ್ತು. ಈಗ ಕುಮಾರಸ್ವಾಮಿ ಅವರಿಗೆ ಉಕ್ಕು ಖಾತೆ ದೊರೆತಿರುವುದರಿಂದ ಕಾರ್ಮಿಕರು ಸಂತಸಗೊಂಡಿದ್ದಾರೆ.ಜಗದೀಶ್‌, ಅಧ್ಯಕ್ಷ, ವಿಐಎಸ್‌ಎಲ್‌ ಕಾರ್ಮಿಕರ ಸಂಘ

110823 VISL Factory Bhadravathi

ಕಾರ್ಮಿಕರ ಸಮಾವೇಶದಲ್ಲಿ ಭಾಗಿಯಾಗಿದ್ದರು

ವಿಐಎಸ್‌ಎಲ್‌ ಕಾರ್ಖಾನೆ ಪುನಶ್ಚೇತನ, ಬಂಡವಾಳ ಹೂಡಿಕೆ ಸಂಬಂಧ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಕಾರ್ಮಿಕರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು. ಪುನಶ್ಚೇತನಕ್ಕೆ ಮನವಿ ಮಾಡಿದ್ದರು. ಈ ಹಿಂದೆ ಕಾರ್ಖಾನೆ ಮುಂಭಾಗ ನಡೆದ ಸಮಾವೇಶದಲ್ಲಿಯು ಕುಮಾರಸ್ವಾಮಿ ಭಾಗಿಯಾಗಿದ್ದರು.

ಕುಮಾರಸ್ವಾಮಿ ಅವರು ಈ ಹಿಂದೆ ನಮ್ಮ ಸರ್ಕಾರ ಬಂದರೆ, ರಾಜ್ಯದಿಂದಲೆ ಕಾರ್ಖಾನೆಗೆ ಸಾವಿರ ಕೋಟಿ ಹೂಡಿಕೆ ಮಾಡುವ ಭರವಸೆ ನೀಡಿದ್ದರು. ಬೆಳಗಾವಿಯಲ್ಲಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದೆವು. ಈಗ ಉಕ್ಕು ಖಾತೆ ದೊರೆತಿದೆ. ವಿಐಎಸ್‌ಎಲ್‌ ಉಳಿಯಲಿದೆ ಎಂಬ ಭರವಸೆ ಮೂಡಿದೆ. ಇವರ ಕಡೆಯಿಂದ ನಿರೀಕ್ಷೆ ಹೆಚ್ಚಾಗಿದೆ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮತ್ತೆ ಮನವಿ ಸಲ್ಲಿಸುತ್ತೇವೆ.  ಕುಮಾರಸ್ವಾಮಿ, ಅಧ್ಯಕ್ಷ, ಎಐಟಿಯುಸಿ

ಅಪ್ಪ ಉಳಿಸಿದ್ದ ಕಾರ್ಖಾನೆ ಈಗ ಮಗನ ಕೈಗೆ

ವಿಐಎಸ್‌ಎಲ್‌ ಕಾರ್ಖಾನೆ ನಿರ್ವಹಣೆ ಜವಾಬ್ದಾರಿ ವಹಿಸಿಕೊಳ್ಳುವಂತೆ ರಾಜ್ಯ ಸರ್ಕಾರ ಈ ಹಿಂದೆ ಕೇಂದ್ರಕ್ಕೆ ಮನವಿ ಮಾಡಿತ್ತು. 1989ರಲ್ಲಿ ಭಾರತೀಯ ಉಕ್ಕು ಪ್ರಾಧಿಕಾರವು ಈ ಕಾರ್ಖಾನೆಯನ್ನು ತನ್ನ ಅಂಗ ಸಂಸ್ಥೆಯಾಗಿ ವಹಿಸಿಕೊಂಡಿತ್ತು. 1998ರಲ್ಲಿ ಉಕ್ಕು ಪ್ರಾಧಿಕಾರದೊಂದಿಗೆ ಕಾರ್ಖಾನೆ ವಿಲೀನವಾಯಿತು. ಹಾಗಾಗಿ ಕಾರ್ಖಾನೆ ಚೇತರಿಸಿಕೊಂಡು ಲಾಭದ ಹಳಿಯತ್ತ ಹೊರಳಿತ್ತು. ಈ ಬೆಳವಣಿಗೆಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಪ್ರಮುಖ ಪಾತ್ರ ವಹಿಸಿದ್ದರು. ಈಗ ವಿಐಎಸ್‌ಎಲ್‌ ಕಾರ್ಖಾನೆ ಪುನಃ ಸಂಕಷ್ಟದಲ್ಲಿದೆ. ಹೆಚ್‌.ಡಿ.ಕುಮಾರಸ್ವಾಮಿ ಅವರು ಉಕ್ಕು ಖಾತೆ ವಹಿಸಿಕೊಂಡಿರುವುದು ಕಾರ್ಖಾನೆ ಉಳಿವಿನ ಕುರಿತು ಚರ್ಚೆ ಶುರುವಾಗಿದೆ

170223 VISL Workers Held Protest in Shimoga City

ಕೈ ತುಂಬಾ ಕೆಲಸ ಕೊಡಿ

ವಿಐಎಸ್‌ಎಲ್‌ನಲ್ಲಿ ಸದ್ಯ ಸಣ್ಣ ಪ್ರಮಾಣದ ಉತ್ಪಾದನೆಯಾಗುತ್ತಿದೆ. ಸುಮಾರು ಒಂದೂವರೆ ಸಾವಿರದಷ್ಟು ಗುತ್ತಿಗೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ತಿಂಗಳಲ್ಲಿ 13 ರಿಂದ 18 ದಿನ ಕೆಲಸ ಸಿಗುತ್ತಿದೆ. ಕೆಲವೊಮ್ಮೆ ತಿಂಗಳಿಗೆ ಸರಿಯಾಗಿ ಸಂಬಳ ಬರುತ್ತಿಲ್ಲ ಎಂಬ ಆಪಾದನೆಯು ಇದೆ.

ಕಾರ್ಖಾನೆಗೆ ಹೊಸ ಯಂತ್ರೋಪಕರಣ ಅಳವಡಿಸಬೇಕಿದೆ. ಬ್ಲಾಸ್ಟ್‌ ಫರ್ನೇಸ್‌ (ಬಿ.ಎಫ್‌), ಸ್ಟೀಲ್‌ ಮೇಕಿಂಗ್‌ ಶಾಫ್ಟ್‌ (ಎಸ್‌ಎಂಎಸ್‌), ಬಾರ್‌ ಮಿಲ್‌, ನ್ಯೂ ರೋಲಿಂಗ್‌ ವಿಭಾಗದಲ್ಲಿ ಕೆಲಸ ಆರಂಭವಾಗಬೇಕಿದೆ. ಕಚ್ಛಾ ವಸ್ತುಗಳು ಹೊರಗಿನಿಂದ ಬರುತ್ತಿದ್ದು ಹೊರೆಯಾಗುತ್ತಿದೆ. ಉತ್ಪನ್ನಗಳಿಗೆ ಆರ್ಡರ್‌ ಬರಬೇಕಿದೆ. ಉಕ್ಕು ಖಾತೆ ವಹಿಸಿಕೊಂಡಿರುವ ಹೆಚ್‌.ಡಿ.ಕುಮಾರಸ್ವಾಮಿ ಅವರು ಮನಸು ಮಾಡಿದರೆ ಕಾರ್ಖಾನೆ ಪುನಶ್ಚೇತನಗೊಳ್ಳಲಿದೆ ಎಂಬುದು ಕಾರ್ಮಿಕರ ಅಭಿಪ್ರಾಯ.

081223-VISL-Delegation-meets-HD-Kumaraswamy-with-MA-Ajith-Gowda.webp

ಪತ್ರಗಳು ಕೆಲಸ ಆರಂಭಿಸಲಿ

ವಿಐಎಸ್‌ಎಲ್‌ ಪುನಶ್ಚೇತನಕ್ಕೆ ಬಂಡವಾಳ ಹೂಡಿಕೆ ಮಾಡುವಂತೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ಪ್ರಧಾನಿಗೆ ಪತ್ರ ಬರೆದಿದ್ದರು. ಕೇಂದ್ರ ಗೃಹ ಸಚಿವ ಅಮಿತ್‌ ಷಾ ಕಾರ್ಖಾನೆ ಉಳಿವಿನ ಕುರಿತು ಉಕ್ಕು ಸಚಿವರಿಗೆ ಪತ್ರ ಬರೆದಿದ್ದರು. ಈಗ ಕುಮಾರಸ್ವಾಮಿ ಅವರು ಉಕ್ಕು ಖಾತೆ ಜವಾಬ್ದಾರಿ ಹೊತ್ತಿದ್ದು ಕಾರ್ಖಾನೆ ಉಳಿವಿನ ನಿರೀಕ್ಷೆ ಇಮ್ಮಡಿಯಾಗಿಸಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಗೀತಾ, ಶಿವರಾಜ್‌ ಕುಮಾರ್‌, ಭವಿಷ್ಯದ ಯೋಜನೆ ಪ್ರಕಟ, ಏನದು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment