ಭದ್ರಾವತಿ ವಿಐಎಸ್ಎಲ್ ಕಾರ್ಖಾನೆ ಮುಂದೆ ಕಾರ್ಮಿಕರ ಪ್ರತಿಭಟನೆ, ಆದೇಶ ಹಿಂಪಡೆಯುವಂತೆ ಘೋಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 JANUARY 2023

BHADRAVATHI | ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (ವಿಐಎಸ್ಎಲ್) ಮುಚ್ಚದಂತೆ ಆಗ್ರಹಿಸಿ ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆ (VISL) ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಮಿಕರು, ಸರ್ಕಾರದ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

VISL-Workers-Protest-in-Bhadravathi

ಈ ಸಂಬಂಧ ಮಾತನಾಡಿದ ಎಐಟಿಯುಸಿ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಕುಮಾರ ಸ್ವಾಮಿ ಅವರು, ವಿಐಎಸ್ಎಲ್ (VISL) ಕಾರ್ಖಾನೆಯನ್ನು ಮುಚ್ಚುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರ ವಿರುದ್ಧ ಸಿಐಟಿಯು ಮತ್ತು ಎಐಟಿಯುಸಿ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ವಿಶ್ವೇಶ್ವರಯ್ಯ ಅವರ ಕನಸಿನ ಕೂಸಾಗಿರುವ ಈ ಕಾರ್ಖಾನೆಯನ್ನು ಕೇಂದ್ರ ಸರ್ಕಾರ ಮುಚ್ಚಬಾರದು ಎಂದು ಆಗ್ರಹಿಸಿ ಪ್ರತಿಭಟಿಸುತ್ತಿದ್ದೇವೆ ಎಂದು ತಿಳಿಸಿದರು.

Shimoga Live 3 Million Views

ಕಾರ್ಖಾನೆಯ ಗುತ್ತಿಗೆ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚದಂತೆ ಘೋಷಣೆ ಕೂಗಿದರು.

VISL Bhadravathi Protest by Workers

ಇದನ್ನೂ ಓದಿ – ಶಿವಮೊಗ್ಗದ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸರು, RAF ಸಿಬ್ಬಂದಿ ಪಥ ಸಂಚಲನ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 19, 2023

Leave a Comment