ಭದ್ರಾವತಿ ಅಂಬೇಡ್ಕರ್ ಸರ್ಕಲ್’ನಲ್ಲಿ ವಿಐಎಸ್ಎಲ್ ಕಾರ್ಮಿಕರ ಅರೆಬೆತ್ತಲೆ ಪ್ರತಿಭಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 13 ಜುಲೈ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭದ್ರಾವತಿ ವಿಐಎಸ್ಎಲ್ ಖಾಸಗೀಕರಣ ಮಾಡಬಾರದು ಹಾಗೂ ಮುಚ್ಚಬಾರದು ಅಂತಾ, ಕಾರ್ಖಾನೆಯ ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ನಿವೃತ್ತ ಕಾರ್ಮಿಕರು ಭದ್ರಾವತಿಯಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಿ, ಪ್ರತಿಭಟಿಸಿದರು.

ಅಂಬೇಡ್ಕರ್ ಸರ್ಕಲ್’ನಲ್ಲಿ ಮಾನವ ಸರಪಳಿ ನಿರ್ಮಿಸಿದ ಕಾರ್ಮಿಕರು, ರಸ್ತೆ ತಡೆ ಮಾಡಿದರು. ಕೇಂದ್ರ ಸರ್ಕಾರ, ಬಿಜೆಪಿ ಮುಖಂಡರು, ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಐಎಸ್ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜಗದೀಶ್, ಈಗಾಗಲೆ ಎಂಪಿಎಂ ಕಾರ್ಖಾನೆಗೆ ಬೀಗ ಹಾಕಲಾಗಿದೆ. ಅಲ್ಲಿನ ಕಾರ್ಮಿಕರು ಬೀದಿ ಪಾಲಾಗುವಂತಾಗಿದೆ. ಈಗ ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚಲು ಕೇಂದ್ರ ಸರ್ಕಾರ ಖಾಸಗೀಕರಣದ ನಾಟಕ ಮಾಡುತ್ತಿದೆ ಎಂದು ಆರೋಪಿಸಿದರು.

ವಿಐಎಸ್ಎಲ್ ಕಾರ್ಖಾನೆ ಉಳಿದರೆ ಭದ್ರಾವತಿಗೆ ಭವಿಷ್ಯ. ಆದ್ದರಿಂದ ಇದು ಕಾರ್ಮಿಕರ ಹೋರಾಟವಷ್ಟೆ ಅಲ್ಲ. ಇಡೀ ಭದ್ರಾವತಿ ಜನತೆಯ ಅಳಿವು ಉಳಿವಿನ ಹೋರಾಟವಾಗಿದೆ. ಇಂದು ಕಾರ್ಮಿಕರು ಕಾರ್ಖಾನೆ ಉಳಿಸಲು ಬೀದಿಗಿಳಿದು ಅರೆಬೆತ್ತಲಾಗಿದ್ದಾರೆ. ಕೇಂದ್ರ ಸರ್ಕಾರ ಕಾರ್ಖಾನೆಯನ್ನು ಸಾರ್ವಜನಿಕ ವಲಯದಲ್ಲಿ ಉಳಿಸಿಕೊಂಡು ಅಭಿವೃದ್ಧಿ ಮಾಡದಿದ್ದರೆ ಇಡೀ ಭದ್ರಾವತಿ ಜನತೆ ಬದುಕು ದುಸ್ಥರವಾಗುತ್ತದೆ ಎಂದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment