ಭದ್ರಾವತಿ VISLಗೆ ಸರ್ಕಾರವೇ ಬಂಡಾವಳ ಹೂಡಿಕೆ ಮಾಡಲಿ, ಕಾರ್ಮಿಕರ ಆಗ್ರಹ, ಪ್ರತಿಭಟನೆ

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

JOB JUNCTION 1 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2020

ವಿಐಎಸ್ಎಲ್ ಕಾರ್ಖಾನೆಯ ಖಾಸಗೀಕರಣಕ್ಕೆ ಕಾರ್ಮಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಕೆ.ಎಸ್.ರಾವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ವಿಐಎಸ್‍ಎಲ್ ಕಾರ್ಮಿಕ ಸಂಘ ಮತ್ತು ಗುತ್ತಿಗೆ ಕಾರ್ಮಿಕ ಸಂಘ ಜಂಟಿಯಾಗಿ ಪ್ರತಿಭಟನೆ ನಡೆಸಿ, ಕಾರ್ಖಾನೆಯನ್ನು ಖಾಸಗೀಕರಣ ನೀತಿಯಿಂದ ಹೊರತೆಗೆಯಬೇಕು. ಸರ್ಕಾರವೇ ಅಗತ್ಯವಿರುವ ಬಂಡಾವಳ ಹೂಡಿಕೆ ಮಾಡಬೇಕು ಎಂದು ಮನವಿ ಮಾಡಿದರು.

ಗುತ್ತಿಗೆ ಕಾರ್ಮಿಕರಿಗೂ ತುಟ್ಟಿಭತ್ಯೆ ಅನ್ವಯಿಸಿ ವೇತನ ನೀಡಬೇಕು, ಮೂಲ ವೇತನಕ್ಕೆ ಅನುಗುಣವಾಗಿ ಹೆಚ್‍ಆರ್‍ಎ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಮಿಕರು ಆಗ್ರಹಿಸಿದರು.

ಕಾರ್ಮಿಕ ಸಂಘದ ಅಧ್ಯಕ್ಷ ಜಗದೀಶ್, ಪ್ರಮುಖರಾದ ರಾಘವೇಂದ್ರ, ಬಸಂತ್ ಕುಮಾರ್, ಅಮೃತಕುಮಾರ್, ಮೋಹನ್, ಗುತ್ತಿಗೆ ಕಾರ್ಮಿಕ ಸಂಘದ ಚಂದ್ರಹಾಸ, ಸುರೇಶ್, ಶ್ರೀನಿವಾಸ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಹೆಚ್ಚಿನ Shimoga News, Shivamogga News ಮತ್ತು BHADRAVATHI ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.

© ಶಿವಮೊಗ್ಗ ಲೈವ್‌ : ಆಗಷ್ಟ್ 26, 2020

Leave a Comment