ಭದ್ರಾವತಿಯಲ್ಲಿ ಅಣಕು ಶವಯಾತ್ರೆ, ನಡು ರಸ್ತೆಯಲ್ಲೇ ಪ್ರತಿಕೃತಿ ದಹನ, ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 FEBRUARY 2023

BHADRAVATHI : ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಕಾರ್ಖಾನೆ ಪುನಶ್ಚೇತನಕ್ಕೆ ಮನವಿ ಮಾಡಲು ಅವಕಾಶ ಕಲ್ಪಿಸದ ಸ್ಥಳೀಯ ರಾಜಕಾರಣಿಗಳ ವಿರುದ್ಧ ಗುತ್ತಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದರು. ಭದ್ರಾವತಿಯಲ್ಲಿ ಅಣಕು ಶವಯಾತ್ರೆ (Effigy) ಕೈಗೊಂಡು ಪ್ರತಿಭಟನೆ ನಡೆಸಿದರು.

VISL-wokers-burn-effigy-of-BS-Yedyurappa-and-BY-Raghavendra-in-Bhadravathi

ಭದ್ರಾವತಿಯ ಪ್ರಮುಖ ರಸ್ತೆಗಳಲ್ಲಿ ಕಳೆದ ರಾತ್ರಿ ಅಣಕು ಶವಯಾತ್ರೆ ನಡೆಸಲಾಯಿತು. ಬಿಜೆಪಿ ಸರ್ಕಾರ ಮತ್ತು ಮುಖಂಡರ ವಿರುದ್ಧ ಘೋಷಣೆ ಕೂಗಿದ ಕಾರ್ಮಿಕರು ಬಳಿಕ ನಡುರಸ್ತೆಯಲ್ಲೆ ಪ್ರತಿಕೃತಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ – ಪ್ರಧಾನಿ ಕಾರ್ಯಕ್ರಮದ ವೇದಿಕೆ ಮುಂದೆ ಬಾಯಿ ಬಡಿದುಕೊಂಡು ಗಮನ ಸೆಳೆಯಲು ಯತ್ನಿಸಿದ ಕಾರ್ಮಿಕರು

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರ ಪ್ರತಿಕೃತಿಗಳನ್ನು (Effigy) ವಿಐಎಸ್ಎಲ್ ನೌಕರರು ದಹಿಸಿದರು. ನಗರದ ವಿವಿಧೆಡೆ ಮೆರವಣಿಗೆ ನಡೆಸಿದ ಕಾರ್ಮಿಕರು, ಘೋಷಣೆ ಕೂಗಿದರು. ವಿಐಎಸ್ಎಲ್ ನೌಕರರಿಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದವು.

Shimoga JNNCE College VTU Ranking

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 28, 2023

Leave a Comment