ಭದ್ರಾ ಡ್ಯಾಮ್‌: ಜನವರಿ 31ರವರೆಗೆ ನದಿಗೆ ನೀರು, ಕಾರಣವೇನು? ಎಷ್ಟು ಹರಿಸಲಾಗುತ್ತದೆ?

ಶಿವಮೊಗ್ಗ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ನಡೆಯಲಿದೆ. ಈ ಹಿನ್ನೆಲೆ ಭದ್ರಾ ಜಲಾಶಯದಿಂದ (Bhadra Dam) ನೀರು ಹರಿಸಲಾಗುತ್ತಿದೆ.

ಭದ್ರಾ ಜಲಾಶಯದಿಂದ ನದಿಗೆ ಜನವರಿ 20 ರಿಂದ ಜನವರಿ 30ರವರೆಗೆ ಪ್ರತಿ ದಿನ 500 ಕ್ಯೂಸೆಕ್‌ನಂತೆ ನೀರು ಹರಿಸಲಾಗುತ್ತದೆ. ಜನವರಿ 31 ರಂದು 300 ಕ್ಯೂಸೆಕ್‌ ನೀರು ಹರಿಸಲು ನಿರ್ಧರಿಸಲಾಗಿದೆ. ಒಟ್ಟು 0.50 ಟಿ.ಎಂ.ಸಿ ನೀರು ಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ, ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Bhadra-Dam-General-Image

ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‌ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ಕೂಡ ನಿರ್ಬಂಧಿಸಲಾಗಿದೆ.

Total-Readers-of-Shivamogga-Live

ಇದನ್ನೂ ಓದಿ – ಶಿವಮೊಗ್ಗದಲ್ಲಿ ಫಲಪುಷ್ಪ ಪ್ರದರ್ಶನದ ದಿನಾಂಕ ಪ್ರಕಟ, ಏನೆಲ್ಲ ವಿಶೇಷತೆ ಇರಲಿದೆ? ಇಲ್ಲಿದೆ ಡಿಟೇಲ್ಸ್‌

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : January 20, 2026 at 1:10 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜನವರಿ 20, 2026

Leave a Comment