ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ನಡೆಯಲಿದೆ. ಈ ಹಿನ್ನೆಲೆ ಭದ್ರಾ ಜಲಾಶಯದಿಂದ (Bhadra Dam) ನೀರು ಹರಿಸಲಾಗುತ್ತಿದೆ.
ಭದ್ರಾ ಜಲಾಶಯದಿಂದ ನದಿಗೆ ಜನವರಿ 20 ರಿಂದ ಜನವರಿ 30ರವರೆಗೆ ಪ್ರತಿ ದಿನ 500 ಕ್ಯೂಸೆಕ್ನಂತೆ ನೀರು ಹರಿಸಲಾಗುತ್ತದೆ. ಜನವರಿ 31 ರಂದು 300 ಕ್ಯೂಸೆಕ್ ನೀರು ಹರಿಸಲು ನಿರ್ಧರಿಸಲಾಗಿದೆ. ಒಟ್ಟು 0.50 ಟಿ.ಎಂ.ಸಿ ನೀರು ಬಿಡಲಾಗುತ್ತದೆ ಎಂದು ಕರ್ನಾಟಕ ನೀರಾವರಿ ನಿಗಮ, ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ಕೂಡ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಫಲಪುಷ್ಪ ಪ್ರದರ್ಶನದ ದಿನಾಂಕ ಪ್ರಕಟ, ಏನೆಲ್ಲ ವಿಶೇಷತೆ ಇರಲಿದೆ? ಇಲ್ಲಿದೆ ಡಿಟೇಲ್ಸ್
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





