ಶಿವಮೊಗ್ಗ: ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು ಎಡದಂಡೆ ಕಾಲುವೆಗಳಲ್ಲಿ ನೀರು ಹರಿಸುವುದನ್ನು ಮುಂದುವರೆಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಲೆಗಳಿಗೆ ಮೇ 17ರವರೆಗೆ ನೀರು ಹರಿಸುವುದನ್ನು ಮುಂದುವರಿಸಲಾಗುವುದು. ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಅಚ್ಚುಕಟ್ಟು ಭಾಗದ ಎಲ್ಲಾ ರೈತರುಗಳು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Will the water supply from Bhadra Dam to canals be extended until May 17? Read the official notification for farmers in the Bhadra command area regarding summer crops.


