SHIVAMOGGA LIVE NEWS | 9 AUGUST 2023
SHIMOGA : ಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸಲು ನೀರಾವರಿ ನಿಗಮ ತೀರ್ಮಾನಿದೆ. ಜತೆಗೆ ನೀರು ಕಡಿಮೆಯಾಗಿ ಬೆಳೆ ನಷ್ಟವಾದರೆ ಅದಕ್ಕೆ ಇಲಾಖೆ ಹೊಣೆಯಲ್ಲ ಎಂದು ಸಹ ತಿಳಿಸಿದೆ.
ಕಾಲುವೆಗಳಿಗೆ ಯಾವಾಗಿಂದ ನೀರು?
ಆ.10ರಿಂದ ಎಡದಂಡೆ, ಬಲದಂಡೆ ಕಾಲುವೆಗಳಿಗೆ ನೀರು ಹರಿಸುವುದಾಗಿ ಪ್ರಕಟಣೆ ಹೊರಡಿಸಿದೆ. ಜಲಾಶಯದಲ್ಲಿ ಪ್ರಸ್ತುತ 166 ಅಡಿ (ಗರಿಷ್ಠ 186 ಅಡಿ) ನೀರು ಇದೆ.
ಯಾವ್ಯಾವ ಕಾಲುವೆಗೆ ಎಷ್ಟು ನೀರು?
ಆ.10ರಿಂದ ನೂರು ದಿನಗಳ ಕಾಲ ಎಡದಂಡೆ ಕಾಲುವೆಗೆ 380 ಕ್ಯೂಸೆಕ್ಸ್, ಬಲದಂಡೆ ಕಾಲುವೆಗೆ 2650 ಕ್ಯೂಸೆಕ್ಸ್ ಹರಿಸಲಾಗುವುದು.
ಒಳಹರಿವಿನ ಆಧಾರದ ಮೇಲೆ ನೀರು
ನೀರಿನ ಲಭ್ಯತೆ, ಒಳಹರಿವಿನ ಆಧಾರದ ಮೇಲೆ ನೀರು ಹರಿಸಲಾಗುತ್ತಿದೆ. ನೀರಿನ ಕೊರತೆಯಿಂದ ಬೆಳೆ ನಷ್ಟವಾದಲ್ಲಿ ಅದಕ್ಕೆ ಇಲಾಖೆ ಹೊಣೆಯಲ್ಲ. ಭದ್ರಾ ಜಲಾಶಯ ವ್ಯಾಪ್ತಿಯ 1.07 ಲಕ್ಷ ಹೆಕ್ಟೇರ್ನಲ್ಲಿ ಪ್ರಕಟಿತ ಮುಂಗಾರು ಬೆಳೆ ಬೆಳೆಯಲು ಅವಕಾಶವಿದ್ದು ನಿಗದಿತ ವಿಸ್ತೀರ್ಣದಲ್ಲಿ ಬೆಳೆ ಬೆಳೆದು ರೈತರು ಸಹಕರಿಸಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ – ಒಂದೇ ಸೇತುವೆ ಬಳಿ ಒಂದೇ ದಿನ ಎರಡು ಪ್ರತ್ಯೇಕ ಅಪಘಾತ, ಒಬ್ಬನ ಸ್ಥಿತಿ ಗಂಭೀರ
ನಷ್ಟಕ್ಕೆ ರೈತರೆ ಹೊಣೆ
ಬೇರೆ ಬೆಳೆ ಬೆಳೆದು ನಷ್ಟ ಅನುಭವಿಸಿದರೆ ಅದಕ್ಕೆ ರೈತರೆ ನೇರ ಹೊಣೆ ಎಂದು ಆದೇಶಿಸಲಾಗಿದೆ.
72 ಟಿಎಂಸಿ ಗರಿಷ್ಠ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 49 ಟಿಎಂಸಿ ಮಾತ್ರ ನೀರಿದೆ. ಮಳೆ ಕೈಕೊಟ್ಟರೆ ರೈತರು ನಷ್ಟ ಅನುಭವಿಸುವುದು ಖಚಿತ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200