SHIVAMOGGA LIVE NEWS | 5 JULY 2024
DAM NEWS : ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಭದ್ರಾ ಜಲಾಶಯದಿಂದ ಸಾವಿರಾರು ಕ್ಯೂಸೆಕ್ ನೀರು (water) ಪೋಲಾಗುತ್ತಿದೆ. ಸ್ಲೂಯಿಸ್ ಗೇಟ್ ನಿರ್ವಹಣೆ ವೇಳೆ ತಾಂತ್ರಿಕ ದೋಷ ಉಂಟಾಗಿ ಗೇಟ್ ಬಂದ್ ಆಗದೆ ಇರುವುದರಿಂದ ನೀರು ಹೊಳೆಗೆ ಹರಿದು ಹೋಗುತ್ತಿದೆ. ಇದು ರೈತರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ನದಿಗೆ ನೀರು ಹರಿಸಲು ಎರಡು ಸ್ಲೂಯಿಸ್ ಗೇಟ್ ಅಥವಾ ರಿವರ್ ಗೇಟ್ ನಿರ್ಮಿಸಲಾಗಿದೆ. ಈ ಪೈಕಿ ಒಂದು ಗೇಟ್ನಿಂದ ಅನಾಯಸವಾಗಿ ನೀರು ಹೊಳೆಗೆ ಹರಿದು ಹೋಗುತ್ತಿದೆ. ಮಳೆಗಾಲಕ್ಕೂ ಮೊದಲು ಭದ್ರಾ ಜಲಾಶಯದ ನಿರ್ವಹಣೆ ಮಾಡಬೇಕು. ಆದರೆ ಮಳೆಗಾಲದ ಹೊತ್ತಿಗೆ ನಿರ್ವಹಣೆ ಮಾಡಲು ಮುಂದಾಗಿದ್ದರು ಎಂಬ ಆರೋಪವಿದೆ. ಈ ಸಂದರ್ಭ ರಿವರ್ ಗೇಟ್ಗಳ ಪೈಕಿ ಒಂದು ಗೇಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿ ನೀರು ಹರಿದು ಹೋಗುತ್ತಿದೆ.
ಮಳೆಗಾಲದಲ್ಲಿ ಜಲಾಶಯದಲ್ಲಿ ನೀರು ಸಂಗ್ರಹವಾಗಬೇಕು. ಇದು ಬೇಸಿಗೆ ಹೊತ್ತಿಗೆ ಅಚ್ಚುಕಟ್ಟು ಭಾಗದ ರೈತರಿಗೆ ಅನುಕೂಲ ಆಗಲಿದೆ. ಆದರೆ ಮಳೆಗಾಲದಲ್ಲಿಯೇ ನೀರು ಹರಿದು ಹೋದರೆ, ಜಲಾಶಯದಲ್ಲಿ ನೀರು ಸಂಗ್ರಹವಾಗದೆ ಮುಂದೆ ಸಮಸ್ಯೆ ಉಂಟಾಗಲಿದೆ ಎಂಬ ಆತಂಕ ರೈತರನ್ನು ಕಾಡುತ್ತಿದೆ.
ಇದನ್ನೂ ಓದಿ – ಮೈದುಂಬಿದ ತುಂಗೆ, ಜಲಾಶಯದ ಒಳ ಹರಿವು ಕುಸಿತ, ಹೊರ ಹರವು ಇಳಿಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200