ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಅರ್ಜಿ ಆಹ್ವಾನ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಭದ್ರಾವತಿ: ತಾಲ್ಲೂಕಿನ ತೋಟಗಾರಿಕೆ ಇಲಾಖೆಯು 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಣಿಗೆ ಅವಕಾಶ ಕಲ್ಪಿಸಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಫಸಲು ನೀಡುತ್ತಿರುವ ಅಡಿಕೆ, ಮಾವು, ಕಾಳುಮೆಣಸು ಮತ್ತು ನಾಟಿ ಮಾಡಿರುವ ಶುಂಠಿ ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದಾಗಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ರೈತ ಸಂಪರ್ಕ ಕೇಂದ್ರ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಆಧಾರ್ ಕಾರ್ಡ್ ಹಾಗೂ ಸ್ವಯಂ ಘೋಷಿತ ಬೆಳೆ ವಿವರಗಳನ್ನು ಲಗತ್ತಿಸಿ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಅಥವಾ ಬ್ಯಾಂಕುಗಳಲ್ಲಿ ಜುಲೈ 31ರ ಒಳಗೆ ವಿಮೆ ಕಂತು ಪಾವತಿಸಬೇಕಾಗಿದೆ.

Agriculture-News-Farmer

ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳ ಮೊಬೈಲ್ ಸಂಖ್ಯೆಗಳಾದ ಕಸಬಾ-1: 9591134415, ಕಸಬಾ-2: 8317333375, ಕೂಡ್ಲಿಗೆರೆ: 7975537143, ಹೊಳೆಹೊನ್ನೂರು-1: 8317404476, ಹೊಳೆಹೊನ್ನೂರು-2: 9591134415 ಹಾಗೂ ಹೊಳೆಹೊನ್ನೂರು-3: 8317404476 ಸಂಪರ್ಕಿಸಬಹುದಾಗಿದೆ.