ಭದ್ರಾವತಿ:ನಗರದ ಕೆಎಸ್ಆರ್ಟಿಸಿ ಮುಖ್ಯ ಬಸ್ ನಿಲ್ದಾಣದ ಸಮೀಪದ ಹೊಸ ಸೇತುವೆ (new bridge) ಮರು ನಿರ್ಮಾಣ ಸ್ಥಳಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ಭೇಟಿ ನೀಡಿದ್ದರು. ಈ ಸಂದರ್ಭ ಅಧಿಕಾರಿಗಳು ಸೇತುವೆಯ ರೂಪುರೇಷೆ ಕುರಿತು ವಿವರಿಸಿದರು.
ಈಗಿರುವ ಹೊಸ ಸೇತುವೆ ಎತ್ತರ ಕಡಿಮೆ ಇದೆ. ಇದರಿಂದ ಪ್ರತಿವರ್ಷ ಮಳೆಗಾಲದಲ್ಲಿ ಸೇತುವೆ ಮುಳುಗಡೆಯಾಗಿ ಸಮಸ್ಯೆ ಉಂಟಾಗುತ್ತಿದೆ. ಭದ್ರಾ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭ ನದಿ ತೀರದ ಮನೆಗಳಿಗೆ ನೀರು ನುಗ್ಗುತ್ತಿದೆ. ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದು ಸವಾಲಿನ ಕೆಲಸವಾಗುತ್ತಿದೆ.
ಸೇತುವೆ ಮುಳುಗಡೆಯಾದ ಸಂದರ್ಭ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತವಾಗುತ್ತದೆ. ಇದರಿಂದ ವಾಹನ ದಟ್ಟಣೆ ಎದುರಾಗುತ್ತಿದೆ. ಸೇತುವೆ ಮರು ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ₹42 ಕೋಟಿ ಅನುದಾನ ಮಂಜೂರಾಗಿದೆ. ಲೋಕೋಪಯೋಗಿ ಇಲಾಖೆ ಸೇತುವೆ ನಿರ್ಮಾಣಕ್ಕೆ ಮುಂದಾಗಿದೆ ಎಂದು ಶಾಸಕರಿಗೆ ಮಾಹಿತಿ ನೀಡಿದರು.
ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯರಾದ ಚನ್ನಪ್ಪ, ಎಂ.ಮಣಿ, ಆರ್. ಶ್ರೇಯಸ್, ಎನ್. ಮಂಜುನಾಥ್, ರಾಜಕುಮಾರ್ ನಗರಸಭೆ ಪೌರಾಯುಕ್ತ ಕೆ.ಎನ್.ಹೇಮಂತ್, ಎಇಇ ಶ್ರೀನಿವಾಸ್, ಗಿರಿಯಪ್ಪ, ನಗರಸಭೆ ಕಿರಿಯ ಅಭಿಯಂತ ಕೆ. ಪ್ರಸಾದ್, ಕೆ.ಜಿ.ಸಂತೋಷ್ ಪಾಟೀಲ್ ಇತರರಿದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ