ಭದ್ರಾವತಿ ಹುಣಸೆಕಟ್ಟೆ ಜಂಕ್ಷನ್’ನಲ್ಲಿ ಕಾಡಾನೆ ಪ್ರತ್ಯಕ್ಷ, ಸ್ಥಳೀಯರಲ್ಲಿ ಢವಢವ

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ

⇒ ಪೂರ್ತಿ ಡಿಟೇಲ್ಸ್‌ಗೆ ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021

ಉಂಬ್ಳೆಬೈಲು ವ್ಯಾಪ್ತಿಯ ಹುಣಸೆಕಟ್ಟೆ ಜಂಕ್ಷನ್’ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಇಲ್ಲಿ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಳವಾಗಿದೆ.

ಬೆಳೆ ಹಾನಿ, ಜನರಲ್ಲಿ ಭೀತಿ

ಹುಣಸೆಕಟ್ಟೆ ಜಂಕ್ಷನ್’ನಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೇರಿದ ಜಮೀನಿನ ಕಾಂಪೌಂಡ್’ಗೆ ಕಾಡಾನೆ ಹಾನಿ ಮಾಡಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ.ಯೋಗೇಶ್ ಅವರಿಗೆ ಸೇರಿದ ಜಮೀನಿಗೂ ಕಾಡಾನೆ ನುಗ್ಗಿದೆ.

AVvXsEjqI8PPMNmhmzTK72s6aHdyGOwaxgBbnPaxEgdNmEiwLVxu2qPFWOl6pNSi5TkLjb7eVIwUDa7oTDLioeFYHsTaIvxkbizculAS6mYiPjBUAXSI3yUj FPfEWxml8DJztTgufNzviEAb8 E9X6L8I0JOYK4raqr

ಇಲ್ಲಿನ ವಿವಿಧೆಡೆ ಜಮೀನಿಗೆ ನುಗ್ಗಿ ತೆಂಗು, ಬಾಳೆ, ಅಡಕೆ, ಸಿಲ್ವರ್ ಮರಗಳ ಬೆಳೆಯನ್ನು ಹಾನಿ ಮಾಡಿದೆ. ಕಾಡಾನೆ ಪ್ರತ್ಯಕ್ಷವಾಗಿರುವ ವಿಚಾರ ತಿಳಿದು ಸ್ಥಳೀಯರಲ್ಲಿ ಆತಂಕ ಮೂಡಿದೆ. ಮತ್ತಷ್ಟು ಬೆಳೆ ಹಾನಿ ಉಂಟು ಮಾಡಬಹುದು ಎಂಬ ಭೀತಿ ಎದುರಾಗಿದೆ.

ಇನ್ನು, ಒಂಟಿ ಸಲಗವನ್ನು ಹುಡುಕಿ, ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಅರಣ್ಯದ ಸುತ್ತಲು ಟ್ರಂಚ್ ಹೊಡೆದಿದ್ದರೆ ಕಾಡಾನೆ ಈ ಭಾಗಕ್ಕೆ ಬರುತ್ತಿರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತವಾಗಿದೆ.

240099106 1185647928581782 8436567541758160179 n.jpg? nc cat=110&ccb=1 5& nc sid=730e14& nc ohc=RXdrm55VsewAX IQT5q& nc ht=scontent.fblr1 5

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

Leave a Comment