ಹೊಳೆಹೊನ್ನೂರು: ಮೈಗಂಟಿರುವ ದೆವ್ವ ಬಿಡಿಸುವುದಾಗಿ (Exorcism) ಹಿಂಸೆ ನೀಡಿದ್ದರಿಂದ ಮಹಿಳೆಯೊಬ್ಬರು ಉಸಿರು ಚೆಲ್ಲಿದ್ದಾರೆ. ಹೊಳೆಹೊನ್ನೂರು ಸಮೀಪದ ಜಂಬರಘಟ್ಟ ಗ್ರಾಮದಲ್ಲಿ ಈ ವಿಚಿತ್ರ ಘಟನೆ ನಡೆದಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಗೀತಮ್ಮ (55) ಮೃತ ದುರ್ದೈವಿ. ಅದೇ ಗ್ರಾಮದ ಆಶಾ (45) ಎಂಬಾಕೆ ದೆವ್ವ ಬಿಡಿಸುವುದಾಗಿ ಹೇಳಿ ಕೋಲಿನಿಂದ ಹೊಡೆದಿದ್ದಾಳೆ.
ದೆವ್ವ ಬಿಡಿಸಲು ಬಂದ ‘ದೇವರು’
ಜಂಬರಘಟ್ಟದ ಗೀತಮ್ಮ ಕೆಲವು ದಿನದಿಂದ ಅನಾರೋಗ್ಯಕ್ಕೀಡಾಗಿದ್ದರು. ದೆವ್ವ ಮೆಟ್ಟಿಕೊಂಡಿರುವ ಶಂಕೆ ಮೇಲೆ ಅದೇ ಗ್ರಾಮದ ಆಶಾ ಎಂಬಾಕೆಯನ್ನು ಕರೆಯಿಸಲಾಗಿತ್ತು. ಆಶಾಳ ಮೈಮೇಲೆ ದೇವರು ಬರುವ ಹಿನ್ನೆಲೆ ಆಕೆಯ ಬಳಿ ಗೀತಮ್ಮಳನ್ನು ತೋರಿಸಲಾಗಿತ್ತು.
ದೆವ್ವ ಬಿಡಿಸುವ ವಿಡಿಯೋ ವೈರಲ್
ದೆವ್ವ ಬಿಡಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗೀತಮ್ಮ ನೆಲದ ಮೇಲೆ ಕುಳಿತಿದ್ದು, ಪಕ್ಕದಲ್ಲಿ ನಿಂತ ಮಹಿಳೆಯೊಬ್ಬಳು ದೊಣ್ಣೆಯೊಂದರಿಂದ ನಿರಂತರವಾಗಿ ಹೊಡೆಯುತ್ತಾಳೆ. ನಿತ್ರಾಣಗೊಂಡಿದ್ದ ಗೀತಮ್ಮ ನೀರು ಬೇಕು ಎಂದು ಅಂಗಲಾಚಿದರು, ಪಕ್ಕದಲ್ಲಿ ನಿಂತಿದ್ದ ಮಹಿಳೆ ನೀರು ಕೊಡಲು ನಿರಾಕರಿಸುತ್ತಾಳೆ. ಒಂದು ನಿಮಿಷದ ವಿಡಿಯೋದಲ್ಲಿ ಗೀತಮ್ಮಳ ತಲೆ, ಮೈ-ಕೈಗೆ ದೊಣ್ಣೆಯಿಂದ ಹೊಡೆಯುವುದು ದಾಖಲಾಗಿದೆ.

ಹೊಡೆತ ತಿಂದು ಕೊನೆಯುಸಿರೆಳೆದ ಗೀತಮ್ಮ
ಕೋಲಿನಿಂದ ನಿರಂತರ ಹೊಡೆತ ತಿಂದ ಗೀತಮ್ಮ ಕೊನೆಯುಸಿರೆಳೆದಿದ್ದಾರೆ. ನಡುರಾತ್ರಿಯವರೆಗೆ ಗೀತಮ್ಮಳಿಗೆ ಹಿಂಸೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ » ಸಿಗಂದೂರು ಸೇತುವೆ, ಎರಡನೇ ಹಂತದ ಲೋಡ್ ಟೆಸ್ಟ್ ಶುರು
ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





