ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 FEBRURARY 2023
BHADRAVATHI : ಸಿದ್ದರಾಮಯ್ಯ ಅವರು 2023ರಲ್ಲಿ ಮುಖ್ಯಮಂತ್ರಿಯಾಗಲಿದ್ದಾರೆ (Chief Minister) ಎಂದ ಯುವಕನ ಮೇಲೆ ಪರಿಚಯದವರೆ ಹಲ್ಲೆ ನಡೆಸಿದ್ದಾರೆ. ಬಟ್ಟೆ ಹರಿದು, ಕಲ್ಲಿನಿಂದ ಹೊಡೆದು ಗಾಯಗೊಳಿಸಿದ್ದಾರೆ.
ಭದ್ರಾವತಿ ಮಲ್ಲಿಗೇನಹಳ್ಳಿ ಕ್ಯಾಂಪ್ ಬಳಿ ಘಟನೆ ನಡೆದಿದೆ. ಮಲ್ಲಿಗೇನಹಳ್ಳಿಯ ಆಕಾಶ್ (28) ಎಂಬಾತನ ಮೇಲೆ ಹಲ್ಲೆಯಾಗಿದೆ.

‘ಸಿದ್ದರಾಮಯ್ಯ ಸಿಎಂ ಆಗ್ತಾರೆ’
ಮಲ್ಲಿಗೇನಹಳ್ಳಿ ಕ್ಯಾಂಪ್ ನಿಂದ ಸ್ವಲ್ಪ ದೂರ ಆಕಾಶ್ ಬರುತ್ತಿರುವಾಗ ಐವರು ಪರಿಚಿತರು ಸಿಕ್ಕಿದ್ದಾರೆ. ಅವರೊಂದಿಗೆ ಮಾತನಾಡುವಾಗ 2013ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ (Chief Minister) ಆಗಿದ್ದರು. 2023ರಲ್ಲಿಯು ಅವರೆ ಸಿಎಂ ಆಗಲಿದ್ದಾರೆ ಎಂದು ಆಕಾಶ್ ಪ್ರತಿಪಾದಿಸಿದ್ದಾರೆ. ಆಗ ಎದುರಿಗಿದ್ದ ಐವರು ಕುಮಾರಸ್ವಾಮಿ ಅವರು ಸಿಎಂ ಆಗಲಿದ್ದಾರೆ ಎಂದು ಹೇಳುತ್ತ ಆಕಾಶ್ ಮೇಲೆ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ – ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಮತ್ತೆ ಪೌಡರ್ ಗ್ಯಾಂಗ್ ಪ್ರತ್ಯಕ್ಷ, ಮಹಿಳೆಗೆ ವಂಚನೆ
ಬಟ್ಟೆ ಹರಿದು, ಕಲ್ಲಲ್ಲಿ ಹೊಡೆದರು
ಆಕಾಶ್ ಮೇಲೆ ದಾಳಿ ನಡೆಸಿದ ಐವರು ಟೀ ಶರ್ಟ್ ಹರಿದು ಹಾಕಿದ್ದಾರೆ. ಕಲ್ಲಿನಿಂದ ಹೊಡೆದಿದ್ದಾರೆ. ಅಲ್ಲದೆ ಜೀವ ಬೆದರಿಕೆಯನ್ನು ಒಡ್ಡಿದ್ದಾರೆ ಎಂದು ಆಕಾಶ್ ದೂರಿನಲ್ಲಿ ಆರೋಪಿಸಿದ್ದಾರೆ. ಸ್ಥಳೀಯರು ಬಂದು ಜಗಳ ಬಿಡಿಸಿ, ಆಕಾಶ್ ನನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು.
ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ‘ರಾತ್ರಿ 11 ಗಂಟೆಗೆ ಮನೆ ಕರೆಂಟ್ ಕಟ್’, SMS ನಂಬಿದ ಶಿವಮೊಗ್ಗದ ಡಾಕ್ಟರ್ ಗೆ ಕಾದಿತ್ತು ದೊಡ್ಡ ಆಘಾತ
LATEST NEWS
- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP












