SHIVAMOGGA LIVE | 18 JULY 2023
BHADRAVATHI : ಗುಟ್ಕಾ ತಿಂದು ಕಂಡ ಕಂಡಲ್ಲಿ ಉಗುಳುವವರಿಗೇನು (spitting gutka) ಕಮ್ಮಿಯಿಲ್ಲ. ನ್ಯಾಯಾಲಯದ ಆವರಣದಲ್ಲಿ ಗುಟ್ಕಾ ಜಗಿದು ಗೋಡೆಗೆ ಉಗಿದ ವ್ಯಕ್ತಿಯೊಬ್ಬನಿಗೆ ನ್ಯಾಯಾಧೀಶರು ತಕ್ಕ ಪಾಠ ಕಲಿಸಿದ್ದಾರೆ. ಆತನಿಂದಲೇ ಗೋಡೆ ಸ್ವಚ್ಛಗೊಳಿಸಿದ್ದಾರೆ.
ಭದ್ರಾವತಿ ನ್ಯಾಯಾಲಯದಲ್ಲಿ ಸೋಮವಾರ ಘಟನೆ ಸಂಭವಿಸಿದೆ. ಹಿರಿಯ ಸಿವಿಲ್ ನ್ಯಾಯಾಲಯದ ಹೊರ ಆವರಣದಲ್ಲಿ ವ್ಯಕ್ತಿಯೊಬ್ಬ ಗುಟ್ಕಾ ಜಗಿದು ಗೋಡೆ ಮೇಲೆ ಉಗುಳಿದ್ದ (spitting gutka). ಇದನ್ನು ಗಮನಿಸಿದ ನ್ಯಾಯಾಧೀಶರು ಆತನನ್ನು ಕರೆಸಿ ಬುದ್ದಿವಾದ ಹೇಳಿದ್ದಾರೆ. ಅಲ್ಲದೆ ಗೋಡೆ ಸ್ವಚ್ಛಗೊಳಿಸುವಂತೆ ಆದೇಶಿಸಿದರು. ಬಕೆಟ್ನಲ್ಲಿ ನೀರು ತಂದು ಆತ ಗೋಡೆಯನ್ನು ಸ್ವಚ್ಛಗೊಳಿಸಿದ್ದಾನೆ.
![]() |
ಇದನ್ನೂ ಓದಿ – ಶಿವಮೊಗ್ಗ KSRTC ಬಸ್ ನಿಲ್ದಾಣದ ಬಳಿ ಬೆಳಗ್ಗೆ ಯುವತಿ ‘ಕಿಡ್ನಾಪ್’, ಸಂಜೆ ವೇಳೆಗೆ ಪ್ರಕರಣಕ್ಕೆ ಟ್ವಿಸ್ಟ್, ಏನದು?
ಬೋರ್ಡ್ ಹಾಕಿದ್ದರು ಕ್ಯಾರೆ ಇಲ್ಲ
ನ್ಯಾಯಾಲಯಕ್ಕೆ ಬರುವ ಕೆಲವರು ಗುಟ್ಕಾ, ಎಲೆ ಅಡಿಕೆ ಜಗಿದು ಗೋಡೆಗಳ ಮೇಲೆ ಉಗುಳುತ್ತಿದ್ದಾರೆ. ಈ ಹಿನ್ನೆಲೆ ನ್ಯಾಯಾಲಯದ ಆವರಣದಲ್ಲಿ ಗೋಡೆಗಳ ಮೇಲೆ ಉಗುಳದಂತೆ ಬೋರ್ಡ್ ಕೂಡ ಹಾಕಲಾಗಿದೆ. ಹಾಗಿದ್ದು ಕೆಲವರು ಇದಕ್ಕೆ ಕ್ಯಾರೆ ಅನ್ನದೆ ಉಗುಳುವುದನ್ನು ಮುಂದುವರೆಸಿದ್ದರು. ಸೋಮವಾರದ ಘಟನೆ ಉಳಿದವರೆಗೆ ಎಚ್ಚರಿಕೆ ಪಾಠವಾಗಿದೆ.
ಸರ್ಕಾರಿ ಕಚೇರಿ, ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ, ಎಲೆ – ಅಡಿಕೆ ಅಗಿದು ಉಗುಳುವುದು ಸಾಮಾನ್ಯವಾಗಿದೆ. ಇಲ್ಲಿಯು ಇದೆ ರೀತಿ ಸ್ವಚ್ಚಗೊಳಿಸುವ ಪರಿಪಾಠ ಮುಂದುವರೆದರೆ ಒಳಿತು ಅನ್ನುವುದು ಸಾರ್ವಜನಿಕ ಅಭಿಪ್ರಾಯ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200