SHIVAMOGGA LIVE NEWS | 30 ಮಾರ್ಚ್ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಲಂಚದ ಹಣ ಸ್ವೀಕರಿಸುತ್ತಿದ್ದ ಗ್ರೇಡ್ 1 ಹೆಚ್ಚುವರಿ ಪ್ರಭಾರ ಪಿಡಿಓ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡಸಿ, ಬಂಧಿಸಿದ್ದಾರೆ.
ಹೊಸನಗರ ತಾಲೂಕು ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಗ್ರೇಡ್ 1 ಹೆಚ್ಚುವರಿ ಪ್ರಭಾರ ಪಿಡಿಓ ಮುರುಗೇಶ್ ಎಸಿಬಿ ಬಲಿಗೆ ಬಿದ್ದ ಅಧಿಕಾರಿ.
ಒಂದು ಲಕ್ಷ ಲಂಚಕ್ಕೆ ಬೇಡಿಕೆ
ಸ್ಥಳೀಯರೊಬ್ಬರಿಗೆ ಭೂ ಪರಿವರ್ತನೆಗೊಂಡ 10 ಗುಂಟೆ ಜಾಗದ ನಿವೇಶನಗಳಿಗೆ ಪ್ಲಾನಿಂಗ್ ಅಪ್ರೂವಲ್ ಮತ್ತು ಮ್ಯೂಟೇಶನ್ ಮಾಡಿಕೊಡಲು ಮುರುಗೇಶ್ ಒಂದು ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಮೊದಲ ಕಂತಿನಲ್ಲಿ 20 ಸಾವಿರ ರೂ. ಲಂಚದ ಹಣವನ್ನು ಸ್ವೀಕರಿಸಿದ್ದ.
ಇವತ್ತು ಮಧ್ಯಾಹ್ನ ಎರಡನೇ ಕಂತಿನ ಲಂಚದ ಹಣ 30 ಸಾವಿರ ರೂ. ಪಡೆಯುತ್ತಿದ್ದ ವೇಳೆ ಶಿವಮೊಗ್ಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಂಚದ ಹಣದ ಸಹಿತ ಮುರೇಶ್ ಸಿಕ್ಕಿಬಿದ್ದಿದ್ದಾನೆ. ಆತನನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.
ಪೂರ್ವ ವಲಯ ಪೊಲೀಸ್ ಅಧೀಕ್ಷಕ ಜಯಪ್ರಕಾಶ್ ಮಾರ್ಗದರ್ಶನದಲ್ಲಿ, ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹ ದಳ ಡಿವೈಎಸ್’ಪಿ ಜೆ.ಲೋಕೇಶ್ ನೇತೃತ್ವದಲ್ಲಿ, ಇನ್ಸ್ ಪೆಕ್ಟರ್ ಇಮ್ರಾನ್ ಬೇಗ್, ಸಿಬ್ಬಂದಿ ವಸಂತ ಕಾಯಕದ, ನಾಗರಾಜ, ರಘುನಾಯ್ಕ, ಸುರೇಂದ್ರ, ಅರುಣ್ ಪವಾರ್, ಯೋಗೇಶ್ವರಪ್ಪ, ಚರಣ್ ರಾಜ್, ಜಯಂತ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






