ಹೊಸನಗರದ ಸಂಪೆಕಟ್ಟೆಯಲ್ಲಿ ಮದ್ಯದ ವಿಚಾರಕ್ಕೆ ರಾಡ್‌ನಿಂದ ಹಲ್ಲೆ, CCTVಯಲ್ಲಿ ದೃಶ್ಯ ಸೆರೆ, ಏನಿದು ಘಟನೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಹೊಸನಗರ: ಮದ್ಯದ ವಿಚಾರವಾಗಿ ನಡುರಸ್ತೆಯಲ್ಲೇ ಯುವಕನೊಬ್ಬನ ಮೇಲೆ ಹಲ್ಲೆ (Attack) ನಡೆಸಲಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ » ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ರೈಲಿನ ಬೋಗಿಯಲ್ಲಿ ಬೆಂಕಿ

ಹೊಸನಗರ ತಾಲೂಕು ನಿಟ್ಟೂರು ಸಮೀಪದ ಸಂಪೆಕಟ್ಟೆ ಸರ್ಕಲ್‌ನಲ್ಲಿ ಘಟನೆ ನಡೆದಿದೆ. ಲಕ್ಷ್ಮೀಶ ಎಂಬಾತ ಗಾಯಗೊಂಡಿದ್ದು, ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಏನಿದು ಘಟನೆ? ಜಗಳಕ್ಕೇನು ಕಾರಣ?

ತುಂಬೆಗದ್ದೆ ಗ್ರಾಮದ ಲಕ್ಷ್ಮೀಶ ರಾತ್ರಿ 10 ಗಂಟೆ ಹೊತ್ತಿಗೆ ಸಂಪೆಕಟ್ಟೆಯ ಅಂಗಡಿಗೆ ತೆರಳಿದ್ದರು. ಈ ಸಂದರ್ಭ ಜೀಪಿನಲ್ಲಿ ಬಂದ ಸುಬ್ರಹ್ಮಣ್ಯ, ಅವಿನಾಶ, ರಾಘವೇಂದ್ರ ಎಂಬುವವರು ಮದ್ಯ ಕೊಡಿಸುವಂತೆ ಲಕ್ಷ್ಮೀಶನಿಗೆ ಹೇಳಿದರು. ಲಕ್ಷ್ಮೀಶ ನಿರಾಕರಿಸಿದಾಗ ಆತನ ಮೇಲೆ ಮನಸೋಯಿಚ್ಛೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

Altercation-between-youths-at-Sampekatte-in-Hosanagara

ಜೀಪ್‌ನ ಟಯರ್‌ ಬಿಚ್ಚುವ ರಾಡ್‌ನಿಂದ ಲಕ್ಷ್ಮೀಶನ ತಲೆಗೆ ಹೊಡೆಯಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಗಾಯಗೊಂಡಿದ್ದ ಲಕ್ಷ್ಮೀಶನನ್ನು ನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಸಂಬಂಧ ಹೊಸನಗರ ತಾಲೂಕು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

June-2025-Report-Shivamogga-Live-New-New.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment