HOSANAGARA, 1 AUGUST 2024 : ಚಕ್ರಾ, ಸಾವೇಹಕ್ಲು ಜಲಾಶಯಗಳಿಗೆ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಬಾಗಿನ (Bagina) ಅರ್ಪಿಸಿದರು. ನಾಲ್ಕು ದಶಕದಲ್ಲಿ ಇದೇ ಮೊದಲ ಬಾರಿ ಇವರೆಡು ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗಿದೆ.
ಯಾರೆಲ್ಲ ಏನೇನು ಹೇಳಿದರು?
ಆರಗ ಜ್ಞಾನೇಂದ್ರ, ಶಾಸಕ
ಈ ಅವಳಿ ಜಲಾಶಯ ಪ್ರದೇಶ ಪ್ರವಾಸೋಧ್ಯಮಕ್ಕೆ ಹೇಳಿ ಮಾಡಿಸಿದ ಜಾಗ. ಜನರು ಜಾಗವನ್ನು ಆಸ್ವಾಧಿಸಲು ಅವಕಾಶ ಮಾಡಿಕೊಡಬೇಕಿದೆ. ಅದರಲ್ಲು ನೀರು ತುಂಬಿ ಸುಭೀಕ್ಷೆ ಹೊರಸೂಸುವ ಹೊತ್ತಲ್ಲಿ ಈ ಪ್ರದೇಶ ಎಲ್ಲರ ಕಣ್ಮನ ಸೆಳೆಯುತ್ತದೆ. ಇದರ ಸಂರಕ್ಷಣೆ ಜೊತೆಗೆ ಅಭಿವೃದ್ಧಿ ಕೂಡ ಅಗತ್ಯವಾಗಿದೆ.
![]() |
ಹರತಾಳು ಹಾಲಪ್ಪ, ಮಾಜಿ ಸಚಿವ
ಜಲಾಶಯ ಪ್ರದೇಶ ಅದ್ಭುತವಾಗಿದೆ. ಎಲ್ಲೆಲ್ಲೂ ನೀರು ಕಾಣುತ್ತಿದೆ. ಮಲೆನಾಡಿಗೆ ಈ ನೀರು ಶಾಪವೂ ಹೌದು. ಆದರೆ ದೇಶದ ಪ್ರಾಕೃತಿಕ ಸಂಪನ್ಮೂಲದ ದೃಷ್ಟಿಯಿಂದ ವರವೂ ಹೌದು. ಸುಂದರವಾದ ಪ್ರದೇಶ. ಇದು ಸದಾ ಲವಲವಿಕೆಯಿಂದ ಇರಬೇಕು. ಇದನ್ನು ಬಳಸಿಕೊಂಡು ಪ್ರವಾಸೋಧ್ಯಮ ಜೊತೆಗೆ ಉದ್ಯೋಗ ಸೃಷ್ಟಿ ಆಗುವಂತ ಯೋಜನೆಗಳು ರೂಪಿಸಬೇಕಾಗಿದೆ.
ಎಸ್.ಎನ್.ಚನ್ನಬಸಪ್ಪ, ಶಾಸಕ
ಹುಡುಗನಾಗಿದ್ದಾಗ ಅನೇಕ ಬಾರಿ ಜಲಾಶಯಕ್ಕೆ ಬಂದಿದ್ದೇನೆ. ಇದು ಅದ್ಭುತ ಪ್ರವಾಸಿ ತಾಣ. ಪ್ರಕೃತಿಯೊಂದಿಗೆ ಬದುಕಿ ಪ್ರಕೃತಿಯನ್ನು ಆರಾಧಿಸಬೇಕು. ಪ್ರವಾಸಿ ಸ್ಥಳವಾಗಿ ಆದ್ಯತೆ ನೀಡಬೇಕಿದೆ.
ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಡಾ. ಧನಂಜಯ ಸರ್ಜಿ, ತಹಶೀಲ್ದಾರ್ ರಶ್ಮೀ ಹಾಲೇಶ್, ವಾರಾಹಿ ಯೋಜನೆ ಕಾಮಗಾರಿ ವಿಭಾಗದ ಪ್ರಭಾರ ಅಧೀಕ್ಷಕ ಎಂಜಿನಿಯರ್ ಪ್ರಕಾಶ ಬ್ರಹ್ಮಾವರ್, ವಿದ್ಯುತ್ ವಿಭಾಗದ ಅಧೀಕ್ಷಕ ಎಂಜಿನಿಯರ್ ಮಹೇಶ್ ಬಿ.ಸಿ, ಕಾಮಗಾರಿ ವಿಭಾಗದ ಎಇಇ ಸುದೀಪ್, ಭದ್ರತಾ ಅಧಿಕಾರಿ ಸದಾಶಿವ, ಕರಿಮನೆ ಗ್ರಾಪಂ ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ ⇓
ನಮ್ಮೂರ ಹೆಮ್ಮೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಹೆಸರು ನೋಂದಣಿಗೆ ಮನವಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200